ಮೈಸೂರು

ಒಳ ಮೀಸಲಾತಿ | ಮೂರು ಹಂತದಲ್ಲಿ ಎಸ್‌ಸಿ ಕುಟುಂಬಗಳ ಸಮೀಕ್ಷೆ

ಮೈಸೂರು : ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮನೆ ಮನೆ ಸಮೀಕ್ಷೆ, ವಿಶೇಷ ಶಿಬಿರ ಹಾಗೂ ಅನ್ಲೈನ್ ನಲ್ಲಿ ಸ್ವಯಂ ಘೋಷಣೆ ಮೂಲಕ 3 ಹಂತಳಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಯುಕೇಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಂಬಂಧ ರಚಿಸಲಾಗಿರುವ ಹೆಚ್.ಎನ್ ನಾಗಮೋಹನ್ ದಾಸ್ ಕಮಿಟಿಯ ಸಮೀಕ್ಷೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳನ್ನು ಗುರುತಿಸಲಾಗಿದೆ.

ಮೂರು ಹಂತಗಳಲ್ಲಿ ಆಗಬೇಕಿರುವ ಸಮೀಕ್ಷೆ. ಜಿಲ್ಲೆಯಿಂದ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ ನ್ನು ಆಯ್ಕೆ ಮಾಡಿ ತರಬೇತಿಗೆ ರಾಜ್ಯ ಮಟ್ಟಕ್ಕೆ ಕಳುಹಿಸಲಾಗಿದೆ. ಮೇ 05 ರಿಂದ 17 ವರೆಗೆ ಮನೆ ಮನೆ ಬೇಟಿ ನೀಡಿ ಸಮೀಕ್ಷೆ ಮಾಡಲಾಗುತ್ತಿದೆ. ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳನ್ನು ಮೇ 19 ರಿಂದ ಮೇ 21 ರವರೆಗೆ ಹಾಗೂ ಅನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಮೇ 19 ರಿಂದ ಮೇ 23 ರವರೆಗೆ ನಡೆಸಲಾಗುತ್ತಿದೆ ಎಂದರು.

ಇಲ್ಲಿ ಪರಿಶಿಷ್ಟ ಜಾತಿಯ ಜನರ ಸಮೀಕ್ಷೆಯನ್ನು ಮಾತ್ರ ನಡೆಸಲಾಗುತ್ತದೆ. ಶಿಕ್ಷಕರು ಸಮೀಕ್ಷೆಗೆ ಮನೆ ಮನೆಗೆ ಬಂದಾಗ ಪರಿಶಿಷ್ಟ ಜಾತಿಯ ಸದಸ್ಯರು ಸಹಕರಿಸಿ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಮಾತನಾಡಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಒಳ ಜಾತಿಗಳಲ್ಲಿ ವಿವಿಧತೆ ಇದೆ. ಆದ್ದರಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣಕ್ಕೆ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮಾಡಲಾಗುತ್ತಿದೆ. ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿ ಜನಾಂಗ ದವರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯಗಳು ಮುಂತಾದ ಸಾಮಾನ್ಯ ಮಾಹಿತಿಗಳು, ಆರ್ಥಿಕತೆಗೆ ಸಂಬಂದಿಸಿದ ಮಾಹಿತಿಗಳು, ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ, ವೃತ್ತಿ , ಭೂಮಿಯ ಒಡೆತನ, ಮನೆ ಆದಾಯ ಮುಂತಾದ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ತಿಳಿಸಿದರು.

ಸಮೀಕ್ಷೆ 3 ಹಂತಗಳಲ್ಲಿ ನಡೆಯುತ್ತದೆ. ಮೊದಲನೇ ಹಂತ ಮನೆ ಮನೆ ಸಮೀಕ್ಷೆ, ಕ್ಯಾಂಪ್ ರೀತಿ ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ಹಾಗೂ ಅನ್ ಲೈನ್ ರಿಜಿಸ್ಟ್ರೇಷನ್ ನಡೆಯುತ್ತದೆ. ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳಲಾಗುವುದು. ಸಮೀಕ್ಷೆ ಮೊಬೈಲ್ ಅಪ್ ಮೂಲಕ ಅನ್ ಲೈನ್ ನಲ್ಲಿ ಸಮೀಕ್ಷೆ ಮಾಡಲಾಗುವುದು. ಸಮೀಕ್ಷೆಯಲ್ಲಿ ಆಧಾರ್ ಸಂಖ್ಯೆ, ಜಾತಿ ಸಂಖ್ಯೆ, ಮೊಬೈಲ್ ಸಂಖ್ಯೆ ಅಗತ್ಯ. ಸಮೀಕ್ಷೆಯಲ್ಲಿ ಆದಿ ಕರ್ನಾಟಕ ಆದಿ ದ್ರಾವಿಡ ಹೀಗೆ ಉಪ ಜಾತಿಗಳನ್ನು ನಮೂದಿಸಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

5 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago