ಮೈಸೂರು

ಒಳಮೀಸಲಾತಿ ಸಮೀಕ್ಷೆ | ವಾರದೊಳಗೆ ಪೂರ್ಣ : ಎಂಎಲ್‌ಸಿ ತಿಮ್ಮಯ್ಯ

ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು.

ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ ಸಮುದಾಯ 30 ವರ್ಷದಿಂದ ಹೋರಾಟ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಚುನಾವಣೆ ವೇಳೆ ಹೇಳಿದಂತೆ ಒಳ ಮೀಸಲಾತಿ ಜಾರಿಗೆ ಮುಂದಾಗಿದ್ದಾರೆ. ಅಂಕಿ ಅಂಶದ ಕೊರತೆ ಇರುವ ಕಾರಣ ನಾಗಮೋಹನ್ ನೇತೃತ್ವದ ಸಮೀಕ್ಷೆ ನಡೆಯುತ್ತಿದೆ. ಇದು ಬಹುತೇಕ ಪೂರ್ಣಗೊಂಡಿದ್ದು, ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸ್ವಯಂ ಘೋಷಿತ ಹೋರಾಟ ಸಮಿತಿಗಳು ಮಾದಿಗ ಸಮುದಾಯದ ಜನರನ್ನ ದಿಕ್ಕು ತಪ್ಪಿಸಿ, ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿವೆ. ಇವಾಗ ಕಿರುಚಾಡುತ್ತಿರುವ ಇವರ್ಯಾರು ಒಳ ಮೀಸಲಾತಿ ಹೋರಾಟದಲ್ಲಿ ಭಾಗಿಯೇ ಆಗಿಲ್ಲ ಎಂದು ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಒಳ ಮೀಸಲಾತಿ ಜಾರಿ ಮಾಡಲಿಲ್ಲ. ಕೆಲ ನಾಯಕರು ಸಿಎಂ ಸಿದ್ದರಾಮಯ್ಯ, ಸಚಿವರಾದ ಮಹದೇವಪ್ಪ, ಆಜನೇಯ, ಮುನಿಯಪ್ಪ ಅವರ ವಿರುದ್ಧ ಅಪಪ್ರಚಾರ ಮಾಡಲು ಮುಂದಾಗಿದ್ದಾರೆ. ಸಮಾಜದ ಶಾಂತಿ ಕದಡುವ ಕೆಲಸವನ್ನೂ ಸಹ ಮಾಡುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:- ಆರ್‌ಸಿಬಿ ವಿಜಯೋತ್ಸವ | ಸರ್ಕಾರದ ಮೇಲೆ ಒತ್ತಡ ಇತ್ತು : ಶಾಸಕ ಹರೀಶ್‌ ಗೌಡ

ಭಾಸ್ಕರ್ ಪ್ರಸಾದ್ ಅನ್ನುವ ವ್ಯಕ್ತಿ ಯಾರೆಂಬುದೇ ಗೊತ್ತಿಲ್ಲ. ಅವರ ಹೋರಾಟಕ್ಕೆ ವಿಪಕ್ಷ ನಾಯಕರ ಕುಮ್ಮಕ್ಕು ಇದೆ. ಇದೇ ತಿಂಗಳ 9ನೇ ತಾರೀಖು ನಡೆಯುವ ಅವರ ಹೋರಾಟಕ್ಕೆ ನಮ್ಮ ಸಮುದಾಯದ ಜನ ಯಾರು ಹೋಗಬಾರದು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

1 hour ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

5 hours ago