Thimmaiah
ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು.
ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ ಸಮುದಾಯ 30 ವರ್ಷದಿಂದ ಹೋರಾಟ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಚುನಾವಣೆ ವೇಳೆ ಹೇಳಿದಂತೆ ಒಳ ಮೀಸಲಾತಿ ಜಾರಿಗೆ ಮುಂದಾಗಿದ್ದಾರೆ. ಅಂಕಿ ಅಂಶದ ಕೊರತೆ ಇರುವ ಕಾರಣ ನಾಗಮೋಹನ್ ನೇತೃತ್ವದ ಸಮೀಕ್ಷೆ ನಡೆಯುತ್ತಿದೆ. ಇದು ಬಹುತೇಕ ಪೂರ್ಣಗೊಂಡಿದ್ದು, ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸ್ವಯಂ ಘೋಷಿತ ಹೋರಾಟ ಸಮಿತಿಗಳು ಮಾದಿಗ ಸಮುದಾಯದ ಜನರನ್ನ ದಿಕ್ಕು ತಪ್ಪಿಸಿ, ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿವೆ. ಇವಾಗ ಕಿರುಚಾಡುತ್ತಿರುವ ಇವರ್ಯಾರು ಒಳ ಮೀಸಲಾತಿ ಹೋರಾಟದಲ್ಲಿ ಭಾಗಿಯೇ ಆಗಿಲ್ಲ ಎಂದು ಹೇಳಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಒಳ ಮೀಸಲಾತಿ ಜಾರಿ ಮಾಡಲಿಲ್ಲ. ಕೆಲ ನಾಯಕರು ಸಿಎಂ ಸಿದ್ದರಾಮಯ್ಯ, ಸಚಿವರಾದ ಮಹದೇವಪ್ಪ, ಆಜನೇಯ, ಮುನಿಯಪ್ಪ ಅವರ ವಿರುದ್ಧ ಅಪಪ್ರಚಾರ ಮಾಡಲು ಮುಂದಾಗಿದ್ದಾರೆ. ಸಮಾಜದ ಶಾಂತಿ ಕದಡುವ ಕೆಲಸವನ್ನೂ ಸಹ ಮಾಡುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ:- ಆರ್ಸಿಬಿ ವಿಜಯೋತ್ಸವ | ಸರ್ಕಾರದ ಮೇಲೆ ಒತ್ತಡ ಇತ್ತು : ಶಾಸಕ ಹರೀಶ್ ಗೌಡ
ಭಾಸ್ಕರ್ ಪ್ರಸಾದ್ ಅನ್ನುವ ವ್ಯಕ್ತಿ ಯಾರೆಂಬುದೇ ಗೊತ್ತಿಲ್ಲ. ಅವರ ಹೋರಾಟಕ್ಕೆ ವಿಪಕ್ಷ ನಾಯಕರ ಕುಮ್ಮಕ್ಕು ಇದೆ. ಇದೇ ತಿಂಗಳ 9ನೇ ತಾರೀಖು ನಡೆಯುವ ಅವರ ಹೋರಾಟಕ್ಕೆ ನಮ್ಮ ಸಮುದಾಯದ ಜನ ಯಾರು ಹೋಗಬಾರದು ಎಂದು ಮನವಿ ಮಾಡಿದರು.
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…