ಮೈಸೂರು

ಒಳಮೀಸಲಾತಿ ಸಮೀಕ್ಷೆ | ವಾರದೊಳಗೆ ಪೂರ್ಣ : ಎಂಎಲ್‌ಸಿ ತಿಮ್ಮಯ್ಯ

ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು.

ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ ಸಮುದಾಯ 30 ವರ್ಷದಿಂದ ಹೋರಾಟ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಚುನಾವಣೆ ವೇಳೆ ಹೇಳಿದಂತೆ ಒಳ ಮೀಸಲಾತಿ ಜಾರಿಗೆ ಮುಂದಾಗಿದ್ದಾರೆ. ಅಂಕಿ ಅಂಶದ ಕೊರತೆ ಇರುವ ಕಾರಣ ನಾಗಮೋಹನ್ ನೇತೃತ್ವದ ಸಮೀಕ್ಷೆ ನಡೆಯುತ್ತಿದೆ. ಇದು ಬಹುತೇಕ ಪೂರ್ಣಗೊಂಡಿದ್ದು, ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸ್ವಯಂ ಘೋಷಿತ ಹೋರಾಟ ಸಮಿತಿಗಳು ಮಾದಿಗ ಸಮುದಾಯದ ಜನರನ್ನ ದಿಕ್ಕು ತಪ್ಪಿಸಿ, ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿವೆ. ಇವಾಗ ಕಿರುಚಾಡುತ್ತಿರುವ ಇವರ್ಯಾರು ಒಳ ಮೀಸಲಾತಿ ಹೋರಾಟದಲ್ಲಿ ಭಾಗಿಯೇ ಆಗಿಲ್ಲ ಎಂದು ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಒಳ ಮೀಸಲಾತಿ ಜಾರಿ ಮಾಡಲಿಲ್ಲ. ಕೆಲ ನಾಯಕರು ಸಿಎಂ ಸಿದ್ದರಾಮಯ್ಯ, ಸಚಿವರಾದ ಮಹದೇವಪ್ಪ, ಆಜನೇಯ, ಮುನಿಯಪ್ಪ ಅವರ ವಿರುದ್ಧ ಅಪಪ್ರಚಾರ ಮಾಡಲು ಮುಂದಾಗಿದ್ದಾರೆ. ಸಮಾಜದ ಶಾಂತಿ ಕದಡುವ ಕೆಲಸವನ್ನೂ ಸಹ ಮಾಡುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:- ಆರ್‌ಸಿಬಿ ವಿಜಯೋತ್ಸವ | ಸರ್ಕಾರದ ಮೇಲೆ ಒತ್ತಡ ಇತ್ತು : ಶಾಸಕ ಹರೀಶ್‌ ಗೌಡ

ಭಾಸ್ಕರ್ ಪ್ರಸಾದ್ ಅನ್ನುವ ವ್ಯಕ್ತಿ ಯಾರೆಂಬುದೇ ಗೊತ್ತಿಲ್ಲ. ಅವರ ಹೋರಾಟಕ್ಕೆ ವಿಪಕ್ಷ ನಾಯಕರ ಕುಮ್ಮಕ್ಕು ಇದೆ. ಇದೇ ತಿಂಗಳ 9ನೇ ತಾರೀಖು ನಡೆಯುವ ಅವರ ಹೋರಾಟಕ್ಕೆ ನಮ್ಮ ಸಮುದಾಯದ ಜನ ಯಾರು ಹೋಗಬಾರದು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

4 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

4 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

4 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

5 hours ago