ಮೈಸೂರು

ಅಂತಾರಾಷ್ಟ್ರೀಯ ಸಮ್ಮೇಳನ : ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ – ಶೈಲೇಶ್ ಹರಿಭಕ್ತಿ

ಮೈಸೂರು : ವಿಶ್ವಕ್ಕೆ ಜಾಗತಿಕ ತಾಪಮಾನ ಕಾಡುತ್ತಿದ್ದು, ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು  ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ತಿಳಿಸಿದರು.

ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಜ್ಞಾನ ಪಾಲುದಾರಿಕೆ ಎಂಬ ವಿಷಯದ ಬಗ್ಗೆ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು.

ಸುಸ್ಥಿರ ಅಭಿವೃದ್ಧಿ ‌ಕಾರ್ಯಕ್ರಮವನ್ನು ಭಾರತವು ಅನುಷ್ಠಾನಕ್ಕೆ ತಂದಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಳೆದ ಮೂರು ವರ್ಷದ ಹಿಂದೆ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮಗಳು ಮುನ್ನಲೆಗೆ ಬಂದವು. ಆದರೆ, ನಂತರ ಇದು ನಿಧಾನಗತಿಯಲ್ಲಿ ಸಾಗಲು ಶುರುವಾಯಿತು. ಆದರೆ, ಇದೀಗ ಮತ್ತೆ ಸುಸ್ಥಿರತೆ ಬಗ್ಗೆ ಹೆಚ್ಚಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಖುಷಿಯ ವಿಚಾರ ಎಂದು ಹೇಳಿದರು.

ಅದೈತ್ವ ಸಿದ್ಧಾಂತದಲ್ಲಿ ಶಂಕರಾಚಾರ್ಯರು ಸುಸ್ಥಿರ ಅಭಿವೃದ್ಧಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬಹಳ ಹಿಂದಿನ ಕಾಲದಿಂದಲೂ ಇದರ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಅರ್ಥಶಾಸಜ್ಞರು ಹೇಳುವ ಪ್ರಕಾರ ಅಭಿವೃದ್ಧಿ ವಿಚಾರದಲ್ಲಿರುವ ನಮ್ಮ ಗುರಿಯನ್ನು ಬದಲಾಯಿಸಿಕೊಳ್ಳಬೇಕಿದೆ. ಜಾಗತಿಕ ತಾಪಮಾನವನ್ನು ತಡೆದುಕೊಳ್ಳುವ ಶಕ್ತಿ ನಮ್ಮ ಪರಿಸರಕ್ಕೆ ಇಲ್ಲ. ಹಾಗಾಗಿ ಪರಿಸರವನ್ನು ಸಂರಕ್ಷಿಸಬೇಕಿದೆ. ಅದಕ್ಕೆ ಬೇಕಾದ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ ಎಂದು ಕಿವಿಮಾತು ಹೇಳಿದರು.

andolana

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

27 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

32 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

36 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

42 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago