ಮೈಸೂರು : ವಿಶ್ವಕ್ಕೆ ಜಾಗತಿಕ ತಾಪಮಾನ ಕಾಡುತ್ತಿದ್ದು, ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ತಿಳಿಸಿದರು.
ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಜ್ಞಾನ ಪಾಲುದಾರಿಕೆ ಎಂಬ ವಿಷಯದ ಬಗ್ಗೆ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು.
ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮವನ್ನು ಭಾರತವು ಅನುಷ್ಠಾನಕ್ಕೆ ತಂದಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಳೆದ ಮೂರು ವರ್ಷದ ಹಿಂದೆ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮಗಳು ಮುನ್ನಲೆಗೆ ಬಂದವು. ಆದರೆ, ನಂತರ ಇದು ನಿಧಾನಗತಿಯಲ್ಲಿ ಸಾಗಲು ಶುರುವಾಯಿತು. ಆದರೆ, ಇದೀಗ ಮತ್ತೆ ಸುಸ್ಥಿರತೆ ಬಗ್ಗೆ ಹೆಚ್ಚಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಖುಷಿಯ ವಿಚಾರ ಎಂದು ಹೇಳಿದರು.
ಅದೈತ್ವ ಸಿದ್ಧಾಂತದಲ್ಲಿ ಶಂಕರಾಚಾರ್ಯರು ಸುಸ್ಥಿರ ಅಭಿವೃದ್ಧಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬಹಳ ಹಿಂದಿನ ಕಾಲದಿಂದಲೂ ಇದರ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಅರ್ಥಶಾಸಜ್ಞರು ಹೇಳುವ ಪ್ರಕಾರ ಅಭಿವೃದ್ಧಿ ವಿಚಾರದಲ್ಲಿರುವ ನಮ್ಮ ಗುರಿಯನ್ನು ಬದಲಾಯಿಸಿಕೊಳ್ಳಬೇಕಿದೆ. ಜಾಗತಿಕ ತಾಪಮಾನವನ್ನು ತಡೆದುಕೊಳ್ಳುವ ಶಕ್ತಿ ನಮ್ಮ ಪರಿಸರಕ್ಕೆ ಇಲ್ಲ. ಹಾಗಾಗಿ ಪರಿಸರವನ್ನು ಸಂರಕ್ಷಿಸಬೇಕಿದೆ. ಅದಕ್ಕೆ ಬೇಕಾದ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ ಎಂದು ಕಿವಿಮಾತು ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…