ಮೈಸೂರು

ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮೈಸೂರಲ್ಲಿ ಬೃಹತ್‌ ಸೈಕಲ್‌ ಜಾಥಾ

ಮೈಸೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸೆ.೧೫ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೬ ಗಂಟೆಗೆ ಮೈಸೂರು ಜಿಲ್ಲೆಯಿಂದ ೧೦ ಜನ ಬೈಕ್ ರೈಡರ್ಸ್‌ಗಳನ್ನು ಬೈಕ್ ಜಾಥಾದ ಮೂಲಕ ಮೈಸೂರು ನಗರದಿಂದ ಬೆಂಗಳೂರಿಗೆ ಕಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಅರಿವು ಮೂಡಿಸುವಲ್ಲಿ ಪ್ರತಿ ಜಿಲ್ಲೆಯಿಂದ ಬರುವ ಬೈಕ್ ಜಾಥಾವನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ಬಾರಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ಸರ್ಕಾರವು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸುವ ಉದ್ದೇಶದಿಂದ ‘ನನ್ನ ಮತ ನನ್ನ ಹಕ್ಕು’ ಎಂಬ ಶೀರ್ಷಿಕೆಯಡಿ ಮೂರು ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ಆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ.೨೬ರಂದು ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲು ನಿರ್ಧರಿಸಿದೆ.

ಸೆ.೧೫ರಂದು ಮೈಸೂರು ಜಿಲ್ಲಾಮಟ್ಟದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆಗಳಿಗೆ ಅಧಿಕೃತವಾಗಿ ವಿದ್ಯುಕ್ತ ಚಾಲನೆ ನೀಡಲಾಗುವುದು. ಸೆ.೧೫ರಿಂದ ನ.೨೬ರವರೆಗೂ ಜಿಲ್ಲೆಯಲ್ಲಿ ವಿವಿಧ ಹಂತಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಈ ಮೇಲಿನ ಸ್ಪರ್ಧೆಗಳನ್ನು ನಡೆಸಿ ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ರಾಜ್ಯಮಟ್ಟಕ್ಕೆ ಕಳಿಸಲಾಗುವುದು. ಜಿಲ್ಲಾಮಟ್ಟದಲ್ಲೂ ಪ್ರಶಸ್ತಿ ವಿತರಣೆ ಮಾಡಲಾಗುವುದು. ೧೪ ವರ್ಷ ಮೇಲ್ಪಟ್ಟ ಎಲ್ಲರೂ ಈ ಜಾಥಾದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಸೈಕಲ್ ಜಾಥಾವು ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಽಕಾರಿಗಳ ಕಚೇರಿಯ ಆವರಣದಿಂದ ಪ್ರಾರಂಭವಾಗಿ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಪುರಭವನದ ಮುಂಭಾಗದ ಅಂಬೇಡ್ಕರ್ ಪುತ್ತಳಿ ಬಳಿ ಮುಕ್ತಾಯಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಯನ್ನು ಹಾಗೂ ಮೊ.ಸಂ.: ೯೪೮೨೩ ೦೦೪೦೦ನ್ನು ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

4 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

4 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

4 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago