ಮೈಸೂರು: ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪುಸ್ತಕದ ಓದು, ಬರಹ ಎಷ್ಟು ಮುಖ್ಯವೋ, ಕ್ಷೇತ್ರ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸಗಳೂ ಅಷ್ಟೇ ಮುಖ್ಯವಾಗಿರುತ್ತವೆ.
ಈ ನಿಟ್ಟಿನಲ್ಲಿ ಮೈಸೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕೌಟಿಲ್ಯ ವಿದ್ಯಾಲಯ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಪ್ರವಾಸದ ಯೋಜನೆಯನ್ನು ರೂಪಿಸಿತ್ತು. ಪೂರಕವಾಗಿ ಪೋಷಕರು ಮತ್ತು ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ಮತ್ತು ಸಹಕಾರದೊಂದಿಗೆ ‘ಸಿಂಗಾಪುರ’ ದೇಶಕ್ಕೆ ಕೌಟಿಲ್ಯ ವಿದ್ಯಾಲಯದಿಂದ ಶೈಕ್ಷಣಿಕ ಪ್ರವಾಸಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಗಿತ್ತು.
ಸಿಂಗಾಪುರ ದೇಶದ ಪ್ರಮುಖ ಸ್ಥಳಗಳಾದ, ಮರೀನಾ ಬೇ, ಗಾರ್ಡನ್ ಬೇ, ಯೂನಿವರ್ಸಲ್ ಸ್ಟುಡಿಯೋ, ಸಿಂಗಾಪುರ್ ನ ಶೈಕ್ಷಣಿಕ ವ್ಯವಸ್ಥೆಯ ಬಗೆಗೆ ಅಧ್ಯುಂನ ಮಾಡುವ ದೃಷ್ಟಿಯಿಂದ ಅಲ್ಲಿನ ಪ್ರತಿಷ್ಠಿತ ಶಾಲೆಗೆ ಭೇಟಿ ನೀಡಲಾಯಿತು.
ಭೇಟಿ ನೀಡಿದ್ದ ಸಂದರ್ಭದಲ್ಲಿ ವಿಶೇಷವಾಗಿ ಆ ಶಾಲೆಯ ಡೀನ್ ತಾವೇ ಸ್ವತಃ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶೇಷ ಸಂಗೀತ ಪರಿಕರಗಳ ಬಗೆಗೆ ತಿಳಿಸಿಕೊಟ್ಟರು.
ಈ ಶೈಕ್ಷಣಿಕ ಪ್ರವಾಸವು ವಿದ್ಯಾರ್ಥಿಗಳಿಗೆ ತುಂಬು ಉತ್ಸಾಹವನ್ನು ತುಂಬುವುದರ ಜೊತೆಗೆ ಕಲಿಕೆಗೂ ಸಹ ಸಹಕಾರಿಯಾಯಿತು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…