ಮೈಸೂರು: ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪುಸ್ತಕದ ಓದು, ಬರಹ ಎಷ್ಟು ಮುಖ್ಯವೋ, ಕ್ಷೇತ್ರ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸಗಳೂ ಅಷ್ಟೇ ಮುಖ್ಯವಾಗಿರುತ್ತವೆ.
ಈ ನಿಟ್ಟಿನಲ್ಲಿ ಮೈಸೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕೌಟಿಲ್ಯ ವಿದ್ಯಾಲಯ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಪ್ರವಾಸದ ಯೋಜನೆಯನ್ನು ರೂಪಿಸಿತ್ತು. ಪೂರಕವಾಗಿ ಪೋಷಕರು ಮತ್ತು ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ಮತ್ತು ಸಹಕಾರದೊಂದಿಗೆ ‘ಸಿಂಗಾಪುರ’ ದೇಶಕ್ಕೆ ಕೌಟಿಲ್ಯ ವಿದ್ಯಾಲಯದಿಂದ ಶೈಕ್ಷಣಿಕ ಪ್ರವಾಸಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಗಿತ್ತು.
ಸಿಂಗಾಪುರ ದೇಶದ ಪ್ರಮುಖ ಸ್ಥಳಗಳಾದ, ಮರೀನಾ ಬೇ, ಗಾರ್ಡನ್ ಬೇ, ಯೂನಿವರ್ಸಲ್ ಸ್ಟುಡಿಯೋ, ಸಿಂಗಾಪುರ್ ನ ಶೈಕ್ಷಣಿಕ ವ್ಯವಸ್ಥೆಯ ಬಗೆಗೆ ಅಧ್ಯುಂನ ಮಾಡುವ ದೃಷ್ಟಿಯಿಂದ ಅಲ್ಲಿನ ಪ್ರತಿಷ್ಠಿತ ಶಾಲೆಗೆ ಭೇಟಿ ನೀಡಲಾಯಿತು.
ಭೇಟಿ ನೀಡಿದ್ದ ಸಂದರ್ಭದಲ್ಲಿ ವಿಶೇಷವಾಗಿ ಆ ಶಾಲೆಯ ಡೀನ್ ತಾವೇ ಸ್ವತಃ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶೇಷ ಸಂಗೀತ ಪರಿಕರಗಳ ಬಗೆಗೆ ತಿಳಿಸಿಕೊಟ್ಟರು.
ಈ ಶೈಕ್ಷಣಿಕ ಪ್ರವಾಸವು ವಿದ್ಯಾರ್ಥಿಗಳಿಗೆ ತುಂಬು ಉತ್ಸಾಹವನ್ನು ತುಂಬುವುದರ ಜೊತೆಗೆ ಕಲಿಕೆಗೂ ಸಹ ಸಹಕಾರಿಯಾಯಿತು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…