ಮೈಸೂರು: ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪುಸ್ತಕದ ಓದು, ಬರಹ ಎಷ್ಟು ಮುಖ್ಯವೋ, ಕ್ಷೇತ್ರ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸಗಳೂ ಅಷ್ಟೇ ಮುಖ್ಯವಾಗಿರುತ್ತವೆ.
ಈ ನಿಟ್ಟಿನಲ್ಲಿ ಮೈಸೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕೌಟಿಲ್ಯ ವಿದ್ಯಾಲಯ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಪ್ರವಾಸದ ಯೋಜನೆಯನ್ನು ರೂಪಿಸಿತ್ತು. ಪೂರಕವಾಗಿ ಪೋಷಕರು ಮತ್ತು ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ಮತ್ತು ಸಹಕಾರದೊಂದಿಗೆ ‘ಸಿಂಗಾಪುರ’ ದೇಶಕ್ಕೆ ಕೌಟಿಲ್ಯ ವಿದ್ಯಾಲಯದಿಂದ ಶೈಕ್ಷಣಿಕ ಪ್ರವಾಸಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಗಿತ್ತು.
ಸಿಂಗಾಪುರ ದೇಶದ ಪ್ರಮುಖ ಸ್ಥಳಗಳಾದ, ಮರೀನಾ ಬೇ, ಗಾರ್ಡನ್ ಬೇ, ಯೂನಿವರ್ಸಲ್ ಸ್ಟುಡಿಯೋ, ಸಿಂಗಾಪುರ್ ನ ಶೈಕ್ಷಣಿಕ ವ್ಯವಸ್ಥೆಯ ಬಗೆಗೆ ಅಧ್ಯುಂನ ಮಾಡುವ ದೃಷ್ಟಿಯಿಂದ ಅಲ್ಲಿನ ಪ್ರತಿಷ್ಠಿತ ಶಾಲೆಗೆ ಭೇಟಿ ನೀಡಲಾಯಿತು.
ಭೇಟಿ ನೀಡಿದ್ದ ಸಂದರ್ಭದಲ್ಲಿ ವಿಶೇಷವಾಗಿ ಆ ಶಾಲೆಯ ಡೀನ್ ತಾವೇ ಸ್ವತಃ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶೇಷ ಸಂಗೀತ ಪರಿಕರಗಳ ಬಗೆಗೆ ತಿಳಿಸಿಕೊಟ್ಟರು.
ಈ ಶೈಕ್ಷಣಿಕ ಪ್ರವಾಸವು ವಿದ್ಯಾರ್ಥಿಗಳಿಗೆ ತುಂಬು ಉತ್ಸಾಹವನ್ನು ತುಂಬುವುದರ ಜೊತೆಗೆ ಕಲಿಕೆಗೂ ಸಹ ಸಹಕಾರಿಯಾಯಿತು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…