ಮೈಸೂರು

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಫೆಬ್ರವರಿ 9 ರಿಂದ 13ರ ವರೆಗೆ ಈ ಶೃಂಗಸಭೆ ನಡೆಯಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಣೆ ಮಾಡಿದ್ದು, ಫೆ.9 ರಿಂದ 13ರ ವರೆಗೆ ನಡೆಯುವ ಶೃಂಗಸಭೆಯಲ್ಲಿ ವಿಶ್ವದ 18 ದೇಶಗಳ ಪ್ರತಿನಿಧಿಗಳು, ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ಸೇರಿದಂತೆ ಇತರೆಡೆ ಹುಲಿ ವಾಸಸ್ಥಾನಗಳಲ್ಲಿ ಅಭಿವೃದ್ಧಿ ಯೋಜನೆಗಳ ನಿಯಂತ್ರಣ, ಅರಣ್ಯದಲ್ಲಿರುವ ಗಿರಿಜನರ ಪುನರ್ವಸತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೇಶ-ವಿದೇಶಗಳ ತಜ್ಞರು ತಮ್ಮ ತಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಲಿದ್ದಾರೆ.

ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ ಸಿದ್ಧತೆಗಳು ಆರಂಭಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆಗೆ ಇನ್ನೂ 3 ದಿನಗಳು ಮಾತ್ರ ಬಾಕಿ ಇದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಸಂಯುಕ್ತವಾಗಿ ಈ ಕಾರ್ಯಾಗಾರ ಆಯೋಜನೆ ಮಾಡಿವೆ. ಭಾರತವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಹಾಗಾಗಿ ಈ ಮಹತ್ವದ ಕಾರ್ಯಕ್ರಮಕ್ಕೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳನ್ನು ಆಯ್ಕೆ ಮಾಡಿರುವುದು ವಿಶೇಷ ಎನ್ನಲಾಗುತ್ತಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಶೃಂಗಸಭೆ
ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಮಹತ್ವ ಪಡೆದಿದೆ. ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆ ಹಾಗೂ ಅತಿ ಹೆಚ್ಚಾಗಿರುವ ಹುಲಿಗಳ ಬಗ್ಗೆ ಈ ಶೃಂಗಸಭೆ ಜಾಗತಿಕ ಗಮನ ಸೆಳೆಯಲಿದೆ. ನಾಲ್ಕು ದಿನಗಳ ಶೃಂಗಸಭೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಲಿದೆ. ಅದರಲ್ಲೂ ಆಧುನಿಕ ತಂತ್ರಜ್ಞಾನ ಬಳಕೆ, ಅಂತಾರಾಷ್ಟ್ರೀಯ ಸಹಕಾರ ಹಾಗೂ ಉತ್ತಮ ಕಾರ್ಯ ನಿರ್ವಹಣೆ ಕುರಿತು ಸಮಾಲೋಚನೆ ಕೂಡ ನಡೆಯಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

28 mins ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

12 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

12 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

12 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

13 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

13 hours ago