ಮೈಸೂರು

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಫೆಬ್ರವರಿ 9 ರಿಂದ 13ರ ವರೆಗೆ ಈ ಶೃಂಗಸಭೆ ನಡೆಯಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಣೆ ಮಾಡಿದ್ದು, ಫೆ.9 ರಿಂದ 13ರ ವರೆಗೆ ನಡೆಯುವ ಶೃಂಗಸಭೆಯಲ್ಲಿ ವಿಶ್ವದ 18 ದೇಶಗಳ ಪ್ರತಿನಿಧಿಗಳು, ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ಸೇರಿದಂತೆ ಇತರೆಡೆ ಹುಲಿ ವಾಸಸ್ಥಾನಗಳಲ್ಲಿ ಅಭಿವೃದ್ಧಿ ಯೋಜನೆಗಳ ನಿಯಂತ್ರಣ, ಅರಣ್ಯದಲ್ಲಿರುವ ಗಿರಿಜನರ ಪುನರ್ವಸತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೇಶ-ವಿದೇಶಗಳ ತಜ್ಞರು ತಮ್ಮ ತಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಲಿದ್ದಾರೆ.

ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ ಸಿದ್ಧತೆಗಳು ಆರಂಭಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆಗೆ ಇನ್ನೂ 3 ದಿನಗಳು ಮಾತ್ರ ಬಾಕಿ ಇದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಸಂಯುಕ್ತವಾಗಿ ಈ ಕಾರ್ಯಾಗಾರ ಆಯೋಜನೆ ಮಾಡಿವೆ. ಭಾರತವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಹಾಗಾಗಿ ಈ ಮಹತ್ವದ ಕಾರ್ಯಕ್ರಮಕ್ಕೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳನ್ನು ಆಯ್ಕೆ ಮಾಡಿರುವುದು ವಿಶೇಷ ಎನ್ನಲಾಗುತ್ತಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಶೃಂಗಸಭೆ
ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಮಹತ್ವ ಪಡೆದಿದೆ. ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆ ಹಾಗೂ ಅತಿ ಹೆಚ್ಚಾಗಿರುವ ಹುಲಿಗಳ ಬಗ್ಗೆ ಈ ಶೃಂಗಸಭೆ ಜಾಗತಿಕ ಗಮನ ಸೆಳೆಯಲಿದೆ. ನಾಲ್ಕು ದಿನಗಳ ಶೃಂಗಸಭೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಲಿದೆ. ಅದರಲ್ಲೂ ಆಧುನಿಕ ತಂತ್ರಜ್ಞಾನ ಬಳಕೆ, ಅಂತಾರಾಷ್ಟ್ರೀಯ ಸಹಕಾರ ಹಾಗೂ ಉತ್ತಮ ಕಾರ್ಯ ನಿರ್ವಹಣೆ ಕುರಿತು ಸಮಾಲೋಚನೆ ಕೂಡ ನಡೆಯಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

11 mins ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

57 mins ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

3 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

3 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

5 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

5 hours ago