ಮೈಸೂರು

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಫೆಬ್ರವರಿ 9 ರಿಂದ 13ರ ವರೆಗೆ ಈ ಶೃಂಗಸಭೆ ನಡೆಯಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಣೆ ಮಾಡಿದ್ದು, ಫೆ.9 ರಿಂದ 13ರ ವರೆಗೆ ನಡೆಯುವ ಶೃಂಗಸಭೆಯಲ್ಲಿ ವಿಶ್ವದ 18 ದೇಶಗಳ ಪ್ರತಿನಿಧಿಗಳು, ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ಸೇರಿದಂತೆ ಇತರೆಡೆ ಹುಲಿ ವಾಸಸ್ಥಾನಗಳಲ್ಲಿ ಅಭಿವೃದ್ಧಿ ಯೋಜನೆಗಳ ನಿಯಂತ್ರಣ, ಅರಣ್ಯದಲ್ಲಿರುವ ಗಿರಿಜನರ ಪುನರ್ವಸತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೇಶ-ವಿದೇಶಗಳ ತಜ್ಞರು ತಮ್ಮ ತಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಲಿದ್ದಾರೆ.

ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ ಸಿದ್ಧತೆಗಳು ಆರಂಭಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆಗೆ ಇನ್ನೂ 3 ದಿನಗಳು ಮಾತ್ರ ಬಾಕಿ ಇದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಸಂಯುಕ್ತವಾಗಿ ಈ ಕಾರ್ಯಾಗಾರ ಆಯೋಜನೆ ಮಾಡಿವೆ. ಭಾರತವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಹಾಗಾಗಿ ಈ ಮಹತ್ವದ ಕಾರ್ಯಕ್ರಮಕ್ಕೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳನ್ನು ಆಯ್ಕೆ ಮಾಡಿರುವುದು ವಿಶೇಷ ಎನ್ನಲಾಗುತ್ತಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಶೃಂಗಸಭೆ
ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಮಹತ್ವ ಪಡೆದಿದೆ. ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆ ಹಾಗೂ ಅತಿ ಹೆಚ್ಚಾಗಿರುವ ಹುಲಿಗಳ ಬಗ್ಗೆ ಈ ಶೃಂಗಸಭೆ ಜಾಗತಿಕ ಗಮನ ಸೆಳೆಯಲಿದೆ. ನಾಲ್ಕು ದಿನಗಳ ಶೃಂಗಸಭೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಲಿದೆ. ಅದರಲ್ಲೂ ಆಧುನಿಕ ತಂತ್ರಜ್ಞಾನ ಬಳಕೆ, ಅಂತಾರಾಷ್ಟ್ರೀಯ ಸಹಕಾರ ಹಾಗೂ ಉತ್ತಮ ಕಾರ್ಯ ನಿರ್ವಹಣೆ ಕುರಿತು ಸಮಾಲೋಚನೆ ಕೂಡ ನಡೆಯಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago