ಮೈಸೂರು

ಮೈಸೂರು | ಗುಲಾಬಿ ಹಾಗೂ ಸಿಹಿ ನೀಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಆಹ್ವಾನ

ಮೈಸೂರು : ಇಂದಿನಿಂದ ಶಾಲೆಗಳು ಆರಂಭವಾದ ಹಿನ್ನೆಲೆ ನಗರದಲ್ಲಿ ಮಕ್ಕಳಿಗೆ ಗುಲಾಬಿ ಹಾಗೂ ಸಿಹಿ ತಿನಿಸುಗಳನ್ನು ನೀಡಿ ಬರಮಾಡಿಕೊಳ್ಳಲಾಯಿತು.

ಮೈಸೂರಿನ ಅಗ್ರಹಾರದಲ್ಲಿರುವ ಅಕ್ಕನ ಬಳಗ ಸರ್ಕಾರಿ ಶಾಲೆಯಲ್ಲಿ ಇಂದು ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಮೈಸೂರಿನ ದುರ್ಗ ಫೌಂಡೇಶನ್ ನ ಸಿಬ್ಬಂದಿಯು ಗುಲಾಬಿ ಹೂ, ಸಿಹಿ ತಿನಿಸುಗಳನ್ನು ನೀಡಿ ಶಾಲೆಗೆ ಬರ ಮಾಡಿಕೊಂಡರು. ಇದೆ ವೇಳೆ ಮಕ್ಕಳಿಗೆ ಅಕ್ಷರಾಭ್ಯಾಷ ನಡೆಸಿ ಶುಭ ಕೋರಲಾಯಿತು.

ಈ ವೇಳೆ ದುರ್ಗ ಫೌಂಡೇಶನ್ ನ ಸಿಬ್ಬಂದಿ ಮಾತನಾಡಿ, ಕನ್ನಡ ಶಾಲೆಗಳು ಅಳಿವಿನಂಚಿನಲ್ಲಿದ್ದು ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕಿದೆ. ಶಾಲೆಯಲ್ಲಿ ಮಕ್ಕಳಿಗೆ ಖುಷಿಯ ವಾತಾವರಣ ನೀಡಿದರೆ ಸಂತಸದಿಂದ ಶಾಲೆಗೆ ಬರಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪೋಷಕರು ಇಂಗ್ಲಿಷ್ ಮಾಧ್ಯಮಗಳ ಮೊರೆ ಹೋಗಿದ್ದಾರೆ, ನಮ್ಮ ಭಾಷೆಯ ಮೇಲೆ ಪೋಷಕರುಗಳಿಗೆ ಕೀಳರಿಮೆ ಇದೆ, ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯ ಕನ್ನಡ ಶಾಲೆಗಳಿಗೆ ಸೇರಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂದು ತಿಳಿಸಿದರು

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

6 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

9 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

9 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

9 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

9 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

9 hours ago