government school
ಮೈಸೂರು : ಇಂದಿನಿಂದ ಶಾಲೆಗಳು ಆರಂಭವಾದ ಹಿನ್ನೆಲೆ ನಗರದಲ್ಲಿ ಮಕ್ಕಳಿಗೆ ಗುಲಾಬಿ ಹಾಗೂ ಸಿಹಿ ತಿನಿಸುಗಳನ್ನು ನೀಡಿ ಬರಮಾಡಿಕೊಳ್ಳಲಾಯಿತು.
ಮೈಸೂರಿನ ಅಗ್ರಹಾರದಲ್ಲಿರುವ ಅಕ್ಕನ ಬಳಗ ಸರ್ಕಾರಿ ಶಾಲೆಯಲ್ಲಿ ಇಂದು ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಮೈಸೂರಿನ ದುರ್ಗ ಫೌಂಡೇಶನ್ ನ ಸಿಬ್ಬಂದಿಯು ಗುಲಾಬಿ ಹೂ, ಸಿಹಿ ತಿನಿಸುಗಳನ್ನು ನೀಡಿ ಶಾಲೆಗೆ ಬರ ಮಾಡಿಕೊಂಡರು. ಇದೆ ವೇಳೆ ಮಕ್ಕಳಿಗೆ ಅಕ್ಷರಾಭ್ಯಾಷ ನಡೆಸಿ ಶುಭ ಕೋರಲಾಯಿತು.
ಈ ವೇಳೆ ದುರ್ಗ ಫೌಂಡೇಶನ್ ನ ಸಿಬ್ಬಂದಿ ಮಾತನಾಡಿ, ಕನ್ನಡ ಶಾಲೆಗಳು ಅಳಿವಿನಂಚಿನಲ್ಲಿದ್ದು ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕಿದೆ. ಶಾಲೆಯಲ್ಲಿ ಮಕ್ಕಳಿಗೆ ಖುಷಿಯ ವಾತಾವರಣ ನೀಡಿದರೆ ಸಂತಸದಿಂದ ಶಾಲೆಗೆ ಬರಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪೋಷಕರು ಇಂಗ್ಲಿಷ್ ಮಾಧ್ಯಮಗಳ ಮೊರೆ ಹೋಗಿದ್ದಾರೆ, ನಮ್ಮ ಭಾಷೆಯ ಮೇಲೆ ಪೋಷಕರುಗಳಿಗೆ ಕೀಳರಿಮೆ ಇದೆ, ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯ ಕನ್ನಡ ಶಾಲೆಗಳಿಗೆ ಸೇರಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂದು ತಿಳಿಸಿದರು
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…