ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಒಂದಾದ ನೀರಾವರಿ ಪೈಪ್ ಗಳ ಬೆಲೆಯೂ ಏರಿಕೆಯಾಗಿದೆ.
ರೂ. 335ರಿಂದ ರೂ. 365ರೂ.ಗಳಿದ್ದ ಪೈಪ್ ಗಳ ಬೆಲೆ ಈಗ ಸರಾಸರಿ 365-395 ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈಗಾಗಲೇ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ರೈತರು ಪರದಾಡುತ್ತಿದ್ದಾರೆ. ಅಲ್ಲದೇ ಬಿತ್ತನೆ ಬೀಜ, ಗೊಬ್ಬರಗಳ ಬೆಲೆ ಏರಿಕೆಯ ನಡುವೆ ಈಗ ಪೈಪ್ಗಳ ಬೆಲೆಯೂ ಏರಿಕೆಯಾಗಿರುವುದು ರೈತರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಫೆಬ್ರವರಿ ಆರಂಭದಲ್ಲಿಯೇ ಭೂಮಿಗಳನ್ನು ಉಳುಮೆ ಮಾಡಿ ಸಿದ್ಧಪಡಿಸಿಕೊಳ್ಳುತ್ತಿದ್ದ ರೈತರು ಈಗಾಗಲೇ ಶುಂಠಿ, ಬಾಳೆ ಹಾಗೂ ಇತರೆ ಬೆಳೆಗಳಿಗೆ ಸಿದ್ಧತೆ ಮಾಡಿ ಮುಗಿಸಿದ್ದಾರೆ. ಇನ್ನೇನು ಆ ಜಮೀನುಗಳಿಗೆ ಪೈಪ್ ಲೈನ್ ಮಾಡಬೇಕು ಎನ್ನುವಷ್ಟರಲ್ಲಿಯೇ ಈ ಬೆಲೆ ಏರಿಕೆಯಾಗಿರುವುದು ನಿಜಕ್ಕೂ ಆಘಾತಕಾರಿ ಎಂಬುದು ರೈತರ ಅನಿಸಿಕೆಯಾಗಿದೆ.
ಈಗಾಗಲೇ ಕೃಷಿ ಕ್ಷೇತ್ರದಲ್ಲಿ ಲಾಭ ಕಡಿಮೆ ಎಂಬ ಅಭಿಪ್ರಾಯವಿದ್ದು, ರೈತರು ಕೃಷಿ ತೊರೆಯುತ್ತಿದ್ದಾರೆ. ಈ ನಡುವೆಯೇ ಇಂತಹ ಬೆಲೆ ಏರಿಕೆಗಳು ರೈತರನ್ನು ಕೃಷಿಯಿಂದ ದೂರ ಮಾಡಲಿವೆ ಎಂಬುದು ರೈತರ ಆತಂಕವಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…