ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಒಂದಾದ ನೀರಾವರಿ ಪೈಪ್ ಗಳ ಬೆಲೆಯೂ ಏರಿಕೆಯಾಗಿದೆ.
ರೂ. 335ರಿಂದ ರೂ. 365ರೂ.ಗಳಿದ್ದ ಪೈಪ್ ಗಳ ಬೆಲೆ ಈಗ ಸರಾಸರಿ 365-395 ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈಗಾಗಲೇ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ರೈತರು ಪರದಾಡುತ್ತಿದ್ದಾರೆ. ಅಲ್ಲದೇ ಬಿತ್ತನೆ ಬೀಜ, ಗೊಬ್ಬರಗಳ ಬೆಲೆ ಏರಿಕೆಯ ನಡುವೆ ಈಗ ಪೈಪ್ಗಳ ಬೆಲೆಯೂ ಏರಿಕೆಯಾಗಿರುವುದು ರೈತರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಫೆಬ್ರವರಿ ಆರಂಭದಲ್ಲಿಯೇ ಭೂಮಿಗಳನ್ನು ಉಳುಮೆ ಮಾಡಿ ಸಿದ್ಧಪಡಿಸಿಕೊಳ್ಳುತ್ತಿದ್ದ ರೈತರು ಈಗಾಗಲೇ ಶುಂಠಿ, ಬಾಳೆ ಹಾಗೂ ಇತರೆ ಬೆಳೆಗಳಿಗೆ ಸಿದ್ಧತೆ ಮಾಡಿ ಮುಗಿಸಿದ್ದಾರೆ. ಇನ್ನೇನು ಆ ಜಮೀನುಗಳಿಗೆ ಪೈಪ್ ಲೈನ್ ಮಾಡಬೇಕು ಎನ್ನುವಷ್ಟರಲ್ಲಿಯೇ ಈ ಬೆಲೆ ಏರಿಕೆಯಾಗಿರುವುದು ನಿಜಕ್ಕೂ ಆಘಾತಕಾರಿ ಎಂಬುದು ರೈತರ ಅನಿಸಿಕೆಯಾಗಿದೆ.
ಈಗಾಗಲೇ ಕೃಷಿ ಕ್ಷೇತ್ರದಲ್ಲಿ ಲಾಭ ಕಡಿಮೆ ಎಂಬ ಅಭಿಪ್ರಾಯವಿದ್ದು, ರೈತರು ಕೃಷಿ ತೊರೆಯುತ್ತಿದ್ದಾರೆ. ಈ ನಡುವೆಯೇ ಇಂತಹ ಬೆಲೆ ಏರಿಕೆಗಳು ರೈತರನ್ನು ಕೃಷಿಯಿಂದ ದೂರ ಮಾಡಲಿವೆ ಎಂಬುದು ರೈತರ ಆತಂಕವಾಗಿದೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…