ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಒಂದಾದ ನೀರಾವರಿ ಪೈಪ್ ಗಳ ಬೆಲೆಯೂ ಏರಿಕೆಯಾಗಿದೆ.
ರೂ. 335ರಿಂದ ರೂ. 365ರೂ.ಗಳಿದ್ದ ಪೈಪ್ ಗಳ ಬೆಲೆ ಈಗ ಸರಾಸರಿ 365-395 ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈಗಾಗಲೇ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ರೈತರು ಪರದಾಡುತ್ತಿದ್ದಾರೆ. ಅಲ್ಲದೇ ಬಿತ್ತನೆ ಬೀಜ, ಗೊಬ್ಬರಗಳ ಬೆಲೆ ಏರಿಕೆಯ ನಡುವೆ ಈಗ ಪೈಪ್ಗಳ ಬೆಲೆಯೂ ಏರಿಕೆಯಾಗಿರುವುದು ರೈತರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಫೆಬ್ರವರಿ ಆರಂಭದಲ್ಲಿಯೇ ಭೂಮಿಗಳನ್ನು ಉಳುಮೆ ಮಾಡಿ ಸಿದ್ಧಪಡಿಸಿಕೊಳ್ಳುತ್ತಿದ್ದ ರೈತರು ಈಗಾಗಲೇ ಶುಂಠಿ, ಬಾಳೆ ಹಾಗೂ ಇತರೆ ಬೆಳೆಗಳಿಗೆ ಸಿದ್ಧತೆ ಮಾಡಿ ಮುಗಿಸಿದ್ದಾರೆ. ಇನ್ನೇನು ಆ ಜಮೀನುಗಳಿಗೆ ಪೈಪ್ ಲೈನ್ ಮಾಡಬೇಕು ಎನ್ನುವಷ್ಟರಲ್ಲಿಯೇ ಈ ಬೆಲೆ ಏರಿಕೆಯಾಗಿರುವುದು ನಿಜಕ್ಕೂ ಆಘಾತಕಾರಿ ಎಂಬುದು ರೈತರ ಅನಿಸಿಕೆಯಾಗಿದೆ.
ಈಗಾಗಲೇ ಕೃಷಿ ಕ್ಷೇತ್ರದಲ್ಲಿ ಲಾಭ ಕಡಿಮೆ ಎಂಬ ಅಭಿಪ್ರಾಯವಿದ್ದು, ರೈತರು ಕೃಷಿ ತೊರೆಯುತ್ತಿದ್ದಾರೆ. ಈ ನಡುವೆಯೇ ಇಂತಹ ಬೆಲೆ ಏರಿಕೆಗಳು ರೈತರನ್ನು ಕೃಷಿಯಿಂದ ದೂರ ಮಾಡಲಿವೆ ಎಂಬುದು ರೈತರ ಆತಂಕವಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…