Mysore
24
overcast clouds

Social Media

ಭಾನುವಾರ, 03 ಮೇ 2026
Light
Dark

ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ಅಕ್ರಮ : ತನಿಖೆಗೆ ಒತ್ತಾಯ

protest

ಮೈಸೂರು : ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಸಾಮಗ್ರಿ ಖರೀದಿಸಲಾಗಿದೆ ಎಂದು ಆರೋಪಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಅಕ್ರಮ ನಡೆಸಿರುವವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ 32 ಗ್ರಾಮ ಪಂಚಾಯ್ತಿಗಳಲ್ಲಿ ಇ-ಟೆಂಡರ್‌ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಒಂದೇ ಏಜನ್ಸಿಯಿಂದ ಒಂದೇ ವಸ್ತುವಿಗೆ ಬೇರೆ ಬೇರೆ ಗ್ರಾ.ಪಂ ಗಳಲ್ಲಿ ಬೇರೆ ಬೇರೆ ದರದಲ್ಲಿ ಖರೀದಿಸಿ ಅಕ್ರಮ ಎಸೆಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಅನ್ಯಾಯವನ್ನು ಸರಿಪಡಿಸಿ ತನಿಖೆಗೆ ಆದೇಶ ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

Tags:
error: Content is protected !!