ಮೈಸೂರು

ಉಡುಪಿ ವಿಡಿಯೋ ಪ್ರಕರಣದಲ್ಲಿ ಇಸ್ಲಾಮಿಕ್ ಕೈವಾಡ ಇದೆ : ಪ್ರಮೋದ್ ಮುತಾಲಿಕ್

ಮೈಸೂರು : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದೆ. ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ‌ ಆಗಿತ್ತು. ಗೃಹ ಸಚಿವರ ಹೇಳಿಕೆ ನಾವು ಒಪ್ಪುವುದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆಯದಿದ್ದರೆ ಸಿಎಂ ಯಾಕೆ ಅಲ್ಲಿಗೆ ಹೋದ್ರು. ಮಕ್ಕಳಿಂದ ಯಾಕೆ ತಪ್ಪೋಪ್ಪಿಗೆ ಪತ್ರ ಬರೆಸಿದ್ದಾರೆ. ಅಂದ ಮೇಲೆ ತಪ್ಪು ಮಾಡಿದ್ದಾರೆ ಎಂದು ಅಲ್ವಾ? ಎಂದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಆ ರೀತಿ ಹೇಳಬಾರದಿತ್ತು. ಎಷ್ಟು ವಿಡಿಯೋಗಳು ಆಫ್ಘಾನಿಸ್ಥಾನ, ಪಾಕಿಸ್ತಾನಕ್ಕೆ ಹೋಗಿದ್ದವೋ ಗೊತ್ತಿಲ್ಲ. ಎಲ್ಲವು ಸಮಗ್ರವಾಗಿ ತನಿಖೆಯಾಗಲಿ ಎಂದು ಹೇಳಿದರು.

ದೇಶದ ಮುಸ್ಲಿಮರು ಸೌಜನ್ಯದಿಂದ ನಡೆದುಕೊಳ್ಳಬೇಕು : ಜ್ಞಾನವಾಪಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದು, ಒಬ್ಬ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಸರಿಯಾಗಿ ಹೇಳಿದ್ದಾರೆ ಎಂದಿದ್ದಾರೆ.

ನೂರು ಕೋಟಿ ಭಾರತೀಯರು ಅವರ ಜೊತೆ ಇರುತ್ತೇವೆ. ದೇಶದ ಮುಸ್ಲಿಮರು ಸೌಜನ್ಯದಿಂದ ನಡೆದುಕೊಳ್ಳಬೇಕು. ಉದ್ದಟತನದ ವರ್ತನೆ ತೋರಬಾರದು. ಕಾಶಿ ವಿಶ್ವನಾಥ ದೇಗುಲವನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು. ಡಿಸೆಂಬರ್ 6ರ ಘಟನೆ ಮರುಕಳಿಸುವಂತೆ ಮಾಡಬೇಡಿ. ಹಿಂದೂಗಳನ್ನು ಕೆರಳಿಸುವ ಕೆಲಸ ಮಾಡಬೇಡಿ ಎಂದು ತಿಳಿಸಿದರು.

ಮುಸ್ಲಿಂ ಸಂಘಟನೆಗಳು ಹದ್ದುಮೀರಿ ವರ್ತಿಸುತ್ತಿವೆ. ದೇಶದ ಮುಸಲ್ಮಾನರು ಬಾಬರ್ ನನ್ನು ಅನುಸರಿಸಿದ್ದು. ಆಕ್ರಮಣಕಾರಿ, ದೇಶದ್ರೋಹಿ ಔರಂಗಜೇಬ್ ನನ್ನು ಅಲ್ಲ. ಈಗಿನ ಮುಸ್ಲಿಮರು ಅವನನ್ನು ಏಕೆ ಅನುಸರಿಸುತ್ತೀರಿ. ಪ್ರಪಂಚದಲ್ಲಿ ಎಲ್ಲಾದರೂ ಜ್ಞಾನವಾಪಿ ಹೆಸರಿನ ಮಸೀದಿ ಇದೆಯಾ? ಅಲ್ಲಿನ ಬಸವ ಸಂಪೂರ್ಣ ಮಸೀದಿ ಕಡೆಗೆ ಮುಖ ಮಾಡಿದೆ. ಅದು ದೇವಸ್ಥಾನ ಎನ್ನಲು ಸಾಕಷ್ಟು ದಾಖಲೆಗಳಿವೆ. ಹೀಗಾಗಿ ಮುಸ್ಲಿಮರು ಸೌಜನ್ಯದಿಂದ ಬಿಟ್ಟು ಕೊಡಬೇಕು ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸೌಜನ್ಯ ಪ್ರಕರಣದ ತನಿಖೆಯಾಗಲಿ : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಆ ಭಾಗದಲ್ಲಿ ಅದೊಂದೆ ಅಲ್ಲ, ಇಪ್ಪತ್ತಕ್ಕೂ ಹೆಚ್ಚು ಅಂತಹ ಘಟನೆಗಳು ನಡೆದಿವೆ. ಸೌಜನ್ಯ ಪ್ರಕರಣದಲ್ಲಿ ಅಮಾಯಕನಿಗೆ ಹತ್ತು ವರ್ಷ ಶಿಕ್ಷೆ ಆಗಿದೆ. ಸೌಜನ್ಯ ಕುಟುಂಬಕ್ಕೆ ಅನ್ಯಾಯವಾಗಿದೆ. ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಿ ಸಮಗ್ರವಾದ ತನಿಖೆ ಮಾಡಬೇಕು. ಸೌಜನ್ಯ ಪ್ರಕರಣ ಮರು ತನಿಖೆ ಆಗಲೇಬೇಕು ಎಂದು ಒತ್ತಾಯಿಸಿದರು.

lokesh

Recent Posts

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

33 mins ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

36 mins ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

41 mins ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

43 mins ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

46 mins ago

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

4 hours ago