ಮೈಸೂರು

ಉಡುಪಿ ವಿಡಿಯೋ ಪ್ರಕರಣದಲ್ಲಿ ಇಸ್ಲಾಮಿಕ್ ಕೈವಾಡ ಇದೆ : ಪ್ರಮೋದ್ ಮುತಾಲಿಕ್

ಮೈಸೂರು : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದೆ. ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ‌ ಆಗಿತ್ತು. ಗೃಹ ಸಚಿವರ ಹೇಳಿಕೆ ನಾವು ಒಪ್ಪುವುದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆಯದಿದ್ದರೆ ಸಿಎಂ ಯಾಕೆ ಅಲ್ಲಿಗೆ ಹೋದ್ರು. ಮಕ್ಕಳಿಂದ ಯಾಕೆ ತಪ್ಪೋಪ್ಪಿಗೆ ಪತ್ರ ಬರೆಸಿದ್ದಾರೆ. ಅಂದ ಮೇಲೆ ತಪ್ಪು ಮಾಡಿದ್ದಾರೆ ಎಂದು ಅಲ್ವಾ? ಎಂದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಆ ರೀತಿ ಹೇಳಬಾರದಿತ್ತು. ಎಷ್ಟು ವಿಡಿಯೋಗಳು ಆಫ್ಘಾನಿಸ್ಥಾನ, ಪಾಕಿಸ್ತಾನಕ್ಕೆ ಹೋಗಿದ್ದವೋ ಗೊತ್ತಿಲ್ಲ. ಎಲ್ಲವು ಸಮಗ್ರವಾಗಿ ತನಿಖೆಯಾಗಲಿ ಎಂದು ಹೇಳಿದರು.

ದೇಶದ ಮುಸ್ಲಿಮರು ಸೌಜನ್ಯದಿಂದ ನಡೆದುಕೊಳ್ಳಬೇಕು : ಜ್ಞಾನವಾಪಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದು, ಒಬ್ಬ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಸರಿಯಾಗಿ ಹೇಳಿದ್ದಾರೆ ಎಂದಿದ್ದಾರೆ.

ನೂರು ಕೋಟಿ ಭಾರತೀಯರು ಅವರ ಜೊತೆ ಇರುತ್ತೇವೆ. ದೇಶದ ಮುಸ್ಲಿಮರು ಸೌಜನ್ಯದಿಂದ ನಡೆದುಕೊಳ್ಳಬೇಕು. ಉದ್ದಟತನದ ವರ್ತನೆ ತೋರಬಾರದು. ಕಾಶಿ ವಿಶ್ವನಾಥ ದೇಗುಲವನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು. ಡಿಸೆಂಬರ್ 6ರ ಘಟನೆ ಮರುಕಳಿಸುವಂತೆ ಮಾಡಬೇಡಿ. ಹಿಂದೂಗಳನ್ನು ಕೆರಳಿಸುವ ಕೆಲಸ ಮಾಡಬೇಡಿ ಎಂದು ತಿಳಿಸಿದರು.

ಮುಸ್ಲಿಂ ಸಂಘಟನೆಗಳು ಹದ್ದುಮೀರಿ ವರ್ತಿಸುತ್ತಿವೆ. ದೇಶದ ಮುಸಲ್ಮಾನರು ಬಾಬರ್ ನನ್ನು ಅನುಸರಿಸಿದ್ದು. ಆಕ್ರಮಣಕಾರಿ, ದೇಶದ್ರೋಹಿ ಔರಂಗಜೇಬ್ ನನ್ನು ಅಲ್ಲ. ಈಗಿನ ಮುಸ್ಲಿಮರು ಅವನನ್ನು ಏಕೆ ಅನುಸರಿಸುತ್ತೀರಿ. ಪ್ರಪಂಚದಲ್ಲಿ ಎಲ್ಲಾದರೂ ಜ್ಞಾನವಾಪಿ ಹೆಸರಿನ ಮಸೀದಿ ಇದೆಯಾ? ಅಲ್ಲಿನ ಬಸವ ಸಂಪೂರ್ಣ ಮಸೀದಿ ಕಡೆಗೆ ಮುಖ ಮಾಡಿದೆ. ಅದು ದೇವಸ್ಥಾನ ಎನ್ನಲು ಸಾಕಷ್ಟು ದಾಖಲೆಗಳಿವೆ. ಹೀಗಾಗಿ ಮುಸ್ಲಿಮರು ಸೌಜನ್ಯದಿಂದ ಬಿಟ್ಟು ಕೊಡಬೇಕು ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸೌಜನ್ಯ ಪ್ರಕರಣದ ತನಿಖೆಯಾಗಲಿ : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಆ ಭಾಗದಲ್ಲಿ ಅದೊಂದೆ ಅಲ್ಲ, ಇಪ್ಪತ್ತಕ್ಕೂ ಹೆಚ್ಚು ಅಂತಹ ಘಟನೆಗಳು ನಡೆದಿವೆ. ಸೌಜನ್ಯ ಪ್ರಕರಣದಲ್ಲಿ ಅಮಾಯಕನಿಗೆ ಹತ್ತು ವರ್ಷ ಶಿಕ್ಷೆ ಆಗಿದೆ. ಸೌಜನ್ಯ ಕುಟುಂಬಕ್ಕೆ ಅನ್ಯಾಯವಾಗಿದೆ. ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಿ ಸಮಗ್ರವಾದ ತನಿಖೆ ಮಾಡಬೇಕು. ಸೌಜನ್ಯ ಪ್ರಕರಣ ಮರು ತನಿಖೆ ಆಗಲೇಬೇಕು ಎಂದು ಒತ್ತಾಯಿಸಿದರು.

lokesh

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

21 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago