Mysore
20
overcast clouds
Light
Dark

ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಶಾಸಕ ಶ್ರೀವತ್ಸರಿಂದ ಹಕ್ಕುಪತ್ರ ವಿತರಣೆ

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್‌ ಸಭಾಂಗಣದಲ್ಲಿ ಕೆ.ಆರ್‌ ಕ್ಷೇತ್ರದ ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಹಕ್ಕುಪತ್ರ, ಹಕ್ಕು ಖುಲಾಸೆ ಮತ್ತು ಎನ್ ಓಸಿಗಳನ್ನು ನೀಡುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ ಭಾಗವಹಿಸಿ ಸಾಂಕೇತಿಕವಾಗಿ ಸಾವಿತ್ರಿ, ಕಮಲಮ್ಮ,ಶಿವರುದ್ರ, ಲಕ್ಷ್ಮಮ್ಮ,ಕೃಷ್ಣಮೂರ್ತಿ ಅವರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ಮುಂದಿನ ಮೂರು ವರ್ಷಗಳಲ್ಲಿ ನಾಲ್ಕು ಸಾವಿರ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. ಬಡವರು,ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಿ ಜೀವನ ಮಾಡಬೇಕು ಹೊರತು ಮತ್ತೊಬ್ಬರಿಗೆ ಮಾರಾಟ,ಬಾಡಿಗೆಗೆ ಕೊಡಬಾರದು ಲಲಿತಾದ್ರಿಪುರದಲ್ಲಿ ಜಿ-ಪ್ಲಸ್ ೯ ಬಹುಮಹಡಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ ೧೬೬೦ ಮನೆಗಳ ನಿರ್ವಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪರಿಶಿಷ್ಟ ಜಾತಿಗೆ ಸೇರಿದ ಫಲಾನುಭವಿಗಳಿಗೆ ೩೯೫ ಮನೆಗಳ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ ಎಂದರು.

ಅಲ್ಲದೆ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ೪ ಸಾವಿರ ಮನೆಗಳನ್ನು ಅರ್ಹರಿಗೆ ಕೊಡಿಸಲು ಬೇಕಾದ ಕ್ರಮ ಕೈಗೊಳ್ಳಲಾಗಿದೆ. ಒಬ್ಬ ಫಲಾನುಭವಿಯು ಒಂದೂವರೆ ಲಕ್ಷ ಕಟ್ಟಿದರೆ, ಉಳಿದ ಹಣ ೧೨ ಲಕ್ಷ ರೂ.ಅನ್ನು ಸರ್ಕಾರ ಭರಿಸಲಿದೆ. ಆಶ್ರಯ ಮನೆಗಳನ್ನು ನಿರ್ಮಿಸಿಕೊಂಡಿರುವ ೧೮೦ ಫಲಾನುಭವಿಗಳಿಗೆ ಹಕ್ಕುಪತ್ರ ಹಂಚಿಕೆ ಮಾಡಲಾಗಿದೆ. ಸರ್ಕಾರದ ಯೋಜನೆಗಳು ಹಳ್ಳಹಿಡಿಯಬಾರದು. ಬಡವನಿಗೆ ಸರ್ಕಾರದ ಕಾರ್ಯಕ್ರಮಗಳ ಸೌಲಭ್ಯಗಳನ್ನು ನೀಡುವಾಗ ಹಣಕ್ಕಾಗಿ ಪೀಡಿಸಬಾರದು. ಒಂದೊತ್ತಿನ ಕೂಲಿ ಮಾಡುವ ಫಲಾನುಭವಿಯಿಂದ ಯಾವುದನ್ನೂ ನಿರೀಕ್ಷೆ ಮಾಡದೆ ಕೆಲಸ ಮಾಡಬೇಕು. ಹಣ ಕೊಟ್ಟು ಪಡೆದುಕೊಂಡೆ ಎನ್ನುವುದು ಬರಬಾರದು. ಒಂದು ವೇಳೆ ನನಗೆ ಗೊತ್ತಿಲ್ಲದೆ ಹಣ ಕೊಟ್ಟು ಹಕ್ಕುಪತ್ರ ಪಡೆದುಕೊಂಡಿದ್ದರೆ ಅಂತಹವರು ನೇರವಾಗಿ ಭೇಟಿ ಮಾಡಿ ನನ್ನಗೆ ಹೇಳಬಹುದು ಎಂದು ಹೇಳಿದರು.

ಹೆಚ್ಚುವರಿ ಆಯುಕ್ತರಾದ ಕುಸುಮಕುಮಾರಿ ಮಾತನಾಡಿ, ತುಂಬಾ ವರ್ಷಗಳ ಕಾಲದಿಂದಲೂ ಹಕ್ಕು ಪತ್ರಗಳು ಸಿಗದೆ ಅಲೆದಾಡುತ್ತಿರುವುದನ್ನು ಗಮನಿಸಿ ಅಗತ್ಯ ಕ್ರಮಕೈಗೊಳ್ಳುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದರಂತೆ ಒಟ್ಟಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು.

ಇನ್ನು ಈ ಸಂದರ್ಭದಲ್ಲಿ ಆಶ್ರಯ ಸಮಿತಿ ವಿಷ್ಣು, ನಿರ್ವಾಹಕ ಜಯರಾಮ್, ಕಚೇರಿ ಸಹಾಯಕ ಉಮೇಶ್, ಮದನ್ ಹಾಜರಿದ್ದರು.