ಮೈಸೂರು

ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಶಾಸಕ ಶ್ರೀವತ್ಸರಿಂದ ಹಕ್ಕುಪತ್ರ ವಿತರಣೆ

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್‌ ಸಭಾಂಗಣದಲ್ಲಿ ಕೆ.ಆರ್‌ ಕ್ಷೇತ್ರದ ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಹಕ್ಕುಪತ್ರ, ಹಕ್ಕು ಖುಲಾಸೆ ಮತ್ತು ಎನ್ ಓಸಿಗಳನ್ನು ನೀಡುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ ಭಾಗವಹಿಸಿ ಸಾಂಕೇತಿಕವಾಗಿ ಸಾವಿತ್ರಿ, ಕಮಲಮ್ಮ,ಶಿವರುದ್ರ, ಲಕ್ಷ್ಮಮ್ಮ,ಕೃಷ್ಣಮೂರ್ತಿ ಅವರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ಮುಂದಿನ ಮೂರು ವರ್ಷಗಳಲ್ಲಿ ನಾಲ್ಕು ಸಾವಿರ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. ಬಡವರು,ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಿ ಜೀವನ ಮಾಡಬೇಕು ಹೊರತು ಮತ್ತೊಬ್ಬರಿಗೆ ಮಾರಾಟ,ಬಾಡಿಗೆಗೆ ಕೊಡಬಾರದು ಲಲಿತಾದ್ರಿಪುರದಲ್ಲಿ ಜಿ-ಪ್ಲಸ್ ೯ ಬಹುಮಹಡಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ ೧೬೬೦ ಮನೆಗಳ ನಿರ್ವಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪರಿಶಿಷ್ಟ ಜಾತಿಗೆ ಸೇರಿದ ಫಲಾನುಭವಿಗಳಿಗೆ ೩೯೫ ಮನೆಗಳ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ ಎಂದರು.

ಅಲ್ಲದೆ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ೪ ಸಾವಿರ ಮನೆಗಳನ್ನು ಅರ್ಹರಿಗೆ ಕೊಡಿಸಲು ಬೇಕಾದ ಕ್ರಮ ಕೈಗೊಳ್ಳಲಾಗಿದೆ. ಒಬ್ಬ ಫಲಾನುಭವಿಯು ಒಂದೂವರೆ ಲಕ್ಷ ಕಟ್ಟಿದರೆ, ಉಳಿದ ಹಣ ೧೨ ಲಕ್ಷ ರೂ.ಅನ್ನು ಸರ್ಕಾರ ಭರಿಸಲಿದೆ. ಆಶ್ರಯ ಮನೆಗಳನ್ನು ನಿರ್ಮಿಸಿಕೊಂಡಿರುವ ೧೮೦ ಫಲಾನುಭವಿಗಳಿಗೆ ಹಕ್ಕುಪತ್ರ ಹಂಚಿಕೆ ಮಾಡಲಾಗಿದೆ. ಸರ್ಕಾರದ ಯೋಜನೆಗಳು ಹಳ್ಳಹಿಡಿಯಬಾರದು. ಬಡವನಿಗೆ ಸರ್ಕಾರದ ಕಾರ್ಯಕ್ರಮಗಳ ಸೌಲಭ್ಯಗಳನ್ನು ನೀಡುವಾಗ ಹಣಕ್ಕಾಗಿ ಪೀಡಿಸಬಾರದು. ಒಂದೊತ್ತಿನ ಕೂಲಿ ಮಾಡುವ ಫಲಾನುಭವಿಯಿಂದ ಯಾವುದನ್ನೂ ನಿರೀಕ್ಷೆ ಮಾಡದೆ ಕೆಲಸ ಮಾಡಬೇಕು. ಹಣ ಕೊಟ್ಟು ಪಡೆದುಕೊಂಡೆ ಎನ್ನುವುದು ಬರಬಾರದು. ಒಂದು ವೇಳೆ ನನಗೆ ಗೊತ್ತಿಲ್ಲದೆ ಹಣ ಕೊಟ್ಟು ಹಕ್ಕುಪತ್ರ ಪಡೆದುಕೊಂಡಿದ್ದರೆ ಅಂತಹವರು ನೇರವಾಗಿ ಭೇಟಿ ಮಾಡಿ ನನ್ನಗೆ ಹೇಳಬಹುದು ಎಂದು ಹೇಳಿದರು.

ಹೆಚ್ಚುವರಿ ಆಯುಕ್ತರಾದ ಕುಸುಮಕುಮಾರಿ ಮಾತನಾಡಿ, ತುಂಬಾ ವರ್ಷಗಳ ಕಾಲದಿಂದಲೂ ಹಕ್ಕು ಪತ್ರಗಳು ಸಿಗದೆ ಅಲೆದಾಡುತ್ತಿರುವುದನ್ನು ಗಮನಿಸಿ ಅಗತ್ಯ ಕ್ರಮಕೈಗೊಳ್ಳುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದರಂತೆ ಒಟ್ಟಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು.

ಇನ್ನು ಈ ಸಂದರ್ಭದಲ್ಲಿ ಆಶ್ರಯ ಸಮಿತಿ ವಿಷ್ಣು, ನಿರ್ವಾಹಕ ಜಯರಾಮ್, ಕಚೇರಿ ಸಹಾಯಕ ಉಮೇಶ್, ಮದನ್ ಹಾಜರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago