ಮೈಸೂರು

ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಶಾಸಕ ಶ್ರೀವತ್ಸರಿಂದ ಹಕ್ಕುಪತ್ರ ವಿತರಣೆ

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್‌ ಸಭಾಂಗಣದಲ್ಲಿ ಕೆ.ಆರ್‌ ಕ್ಷೇತ್ರದ ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಹಕ್ಕುಪತ್ರ, ಹಕ್ಕು ಖುಲಾಸೆ ಮತ್ತು ಎನ್ ಓಸಿಗಳನ್ನು ನೀಡುವ ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ ಭಾಗವಹಿಸಿ ಸಾಂಕೇತಿಕವಾಗಿ ಸಾವಿತ್ರಿ, ಕಮಲಮ್ಮ,ಶಿವರುದ್ರ, ಲಕ್ಷ್ಮಮ್ಮ,ಕೃಷ್ಣಮೂರ್ತಿ ಅವರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ಮುಂದಿನ ಮೂರು ವರ್ಷಗಳಲ್ಲಿ ನಾಲ್ಕು ಸಾವಿರ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. ಬಡವರು,ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಿ ಜೀವನ ಮಾಡಬೇಕು ಹೊರತು ಮತ್ತೊಬ್ಬರಿಗೆ ಮಾರಾಟ,ಬಾಡಿಗೆಗೆ ಕೊಡಬಾರದು ಲಲಿತಾದ್ರಿಪುರದಲ್ಲಿ ಜಿ-ಪ್ಲಸ್ ೯ ಬಹುಮಹಡಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ ೧೬೬೦ ಮನೆಗಳ ನಿರ್ವಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪರಿಶಿಷ್ಟ ಜಾತಿಗೆ ಸೇರಿದ ಫಲಾನುಭವಿಗಳಿಗೆ ೩೯೫ ಮನೆಗಳ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ ಎಂದರು.

ಅಲ್ಲದೆ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ೪ ಸಾವಿರ ಮನೆಗಳನ್ನು ಅರ್ಹರಿಗೆ ಕೊಡಿಸಲು ಬೇಕಾದ ಕ್ರಮ ಕೈಗೊಳ್ಳಲಾಗಿದೆ. ಒಬ್ಬ ಫಲಾನುಭವಿಯು ಒಂದೂವರೆ ಲಕ್ಷ ಕಟ್ಟಿದರೆ, ಉಳಿದ ಹಣ ೧೨ ಲಕ್ಷ ರೂ.ಅನ್ನು ಸರ್ಕಾರ ಭರಿಸಲಿದೆ. ಆಶ್ರಯ ಮನೆಗಳನ್ನು ನಿರ್ಮಿಸಿಕೊಂಡಿರುವ ೧೮೦ ಫಲಾನುಭವಿಗಳಿಗೆ ಹಕ್ಕುಪತ್ರ ಹಂಚಿಕೆ ಮಾಡಲಾಗಿದೆ. ಸರ್ಕಾರದ ಯೋಜನೆಗಳು ಹಳ್ಳಹಿಡಿಯಬಾರದು. ಬಡವನಿಗೆ ಸರ್ಕಾರದ ಕಾರ್ಯಕ್ರಮಗಳ ಸೌಲಭ್ಯಗಳನ್ನು ನೀಡುವಾಗ ಹಣಕ್ಕಾಗಿ ಪೀಡಿಸಬಾರದು. ಒಂದೊತ್ತಿನ ಕೂಲಿ ಮಾಡುವ ಫಲಾನುಭವಿಯಿಂದ ಯಾವುದನ್ನೂ ನಿರೀಕ್ಷೆ ಮಾಡದೆ ಕೆಲಸ ಮಾಡಬೇಕು. ಹಣ ಕೊಟ್ಟು ಪಡೆದುಕೊಂಡೆ ಎನ್ನುವುದು ಬರಬಾರದು. ಒಂದು ವೇಳೆ ನನಗೆ ಗೊತ್ತಿಲ್ಲದೆ ಹಣ ಕೊಟ್ಟು ಹಕ್ಕುಪತ್ರ ಪಡೆದುಕೊಂಡಿದ್ದರೆ ಅಂತಹವರು ನೇರವಾಗಿ ಭೇಟಿ ಮಾಡಿ ನನ್ನಗೆ ಹೇಳಬಹುದು ಎಂದು ಹೇಳಿದರು.

ಹೆಚ್ಚುವರಿ ಆಯುಕ್ತರಾದ ಕುಸುಮಕುಮಾರಿ ಮಾತನಾಡಿ, ತುಂಬಾ ವರ್ಷಗಳ ಕಾಲದಿಂದಲೂ ಹಕ್ಕು ಪತ್ರಗಳು ಸಿಗದೆ ಅಲೆದಾಡುತ್ತಿರುವುದನ್ನು ಗಮನಿಸಿ ಅಗತ್ಯ ಕ್ರಮಕೈಗೊಳ್ಳುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದರಂತೆ ಒಟ್ಟಿಗೆ ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು.

ಇನ್ನು ಈ ಸಂದರ್ಭದಲ್ಲಿ ಆಶ್ರಯ ಸಮಿತಿ ವಿಷ್ಣು, ನಿರ್ವಾಹಕ ಜಯರಾಮ್, ಕಚೇರಿ ಸಹಾಯಕ ಉಮೇಶ್, ಮದನ್ ಹಾಜರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

3 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

8 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

8 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

8 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

9 hours ago