ಎಚ್ ಡಿ ಕೋಟೆ : ಜೆ ಡಿ ಎಸ್ ಪಕ್ಷದ ಕಚೇರಿಗೆ ನಿಖಿಲ್ ಹಾಗೂ ಹರೀಶ್ ಗೌಡ ರನ್ನುಅದ್ದೂರಿಯಾಗಿ ಬರಮಾಡಿಕೊಳ್ಳಲು ಪಟೇಲ್ ರಾಜೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅ.27 ರಂದು ಎಚ್ ಡಿ ಕೋಟೆಗೆ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪುತ್ರ ಹರೀಶ್ ಗೌಡ ಇಬ್ಬರು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿನಡೆಯುವ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಭೇಟಿ ನೀಡುತ್ತಾರೆ.
ನಂತರ ಕಾರ್ಯಕ್ರಮ ಮುಗಿಸಿ ಜೆ ಡಿ ಎಸ್ ಪಕ್ಷದ ಕಚೇರಿಗೆ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ನೆನ್ನೆಯಷ್ಟೇ ಪಕ್ಷದ ವರಿಷ್ಠರು ಜಿಲ್ಲೆಯ ಮೂರು ತಾಲ್ಲೂಕುಗಳ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸಿದ್ದಾರೆ. ಆದರೆ ಮತ್ತೊಮ್ಮೆ ಪಟ್ಟಣದ ಜೆ ಡಿ ಎಸ್ ಕಚೇರಿಗೆ ಭೇಟಿ ನೀಡಿ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಮತ್ತಷ್ಟು ಚರ್ಚೆ ನಡೆಸುತ್ತಾರೆ ಎಂದು ಪಟೇಲ್ ರಾಜೇಗೌಡ ತಿಳಿಸಿದ್ದಾರೆ. ಹೀಗಾಗಿ ಗೊಂದಲದಲ್ಲಿರುವ ಕ್ಷೇತ್ರದ ಜನತೆಗೆ ಪರಿಹಾರ ಸೂಚಿಸುವರಾ ಎಂಬುದನ್ನು ಕಾದು ನೋಡಬೇಕಾಗಿದೆ.
ಸಭೆಯಲ್ಲಿ ಗೋಪಾಲಸ್ವಾಮಿ, ಚಾ ನಂಜುಂಡ ಮೂರ್ತಿ, ಮಳಲಿ ಶಾಂತಕುಮಾರ, ನಯೀಮ್, ಯುವಜನತಾದಳದ ಅಧ್ಯಕ್ಚ ಚರಣ್, ನಾಗನಹಳ್ಳಿ ದಿನೇಶ್, ಶಫೀವುಲ್ಲಾ, ಸುಧೀರ್ ,ರಾಜಾಚಾರಿ, ಶಿವಕುಮಾರ, ಸತೀಶ್ ಕದಂಬ, ವೇಣುಗೋಪಾಲ್, ಪಕ್ಷದ ಹಿರಿಯರು ಮಖಂಡರು ಭಾಗಿಯಾಗಿದ್ದರು.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…