ಮೈಸೂರು

ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ, ಅದು ಬದಲಾಗಬೇಕು : ಎಸ್‌.ಎಲ್‌.ಭೈರಪ್ಪ

ಮೈಸೂರು : ಸಾವ್ರಾಜ್ಯ ರಕ್ಷಣೆಗಾಗಿ ಬ್ರಿಟಿಷರು ಭಾರತೀಯರ ಇತಿಹಾಸ, ತತ್ವಶಾಸ್ತ್ರವನ್ನು ತಮಗೆ ಬೇಕಾದಂತೆ ಬರೆದುಕೊಂಡಿದ್ದು, ನಾವು ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ. ಅದು ಬದಲಾಗಬೇಕು ಎಂದು ಖ್ಯಾತ ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಹೇಳಿದರು.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಝೀರೊ ಡಿಗ್ರಿ ಪ್ರಕಾಶನದ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ತಮ್ಮ ವಂಶವೃಕ್ಷೆ ಕಾದಂಬರಿಯ ತಮಿಳು ಅವತರಣಿಕೆ ವಂಶವೃಕ್ಷಂ ಎಂಬ ಕೃತಿಯನ್ನು ಬಿಡುಗಡೆ ಮಾಡಿ ಅನುವಾದಕ ಕೆ.ನಲ್ಲ ತಂಬಿ ಅವರನ್ನು ಅಭಿನಂದಿಸಿ ಮಾತನಾಡಿ, ದೇಶದ ಎಲ್ಲ ಭಾಷೆಗಳಿಗೂ ನನ್ನ ಬಹುತೇಕ ಕಾದಂಬರಿಗಳು ಅನುವಾದಗೊಂಡಿದ್ದರೂ, ಇದುವರೆಗೂ ತಮಿಳು ಭಾಷೆಗೆ ಅನುವಾದ ಆಗಿರಲಿಲ್ಲ. ಬೇರೆ ಭಾಷೆಗೆ ನನ್ನ ಕೃತಿಯನ್ನು ಅನುವಾದ ಮಾಡಲು ನಾನು ತಕ್ಷಣಕ್ಕೆ ಅನುಮತಿ ಕೊಡುವುದಿಲ್ಲ. ಅನುಮತಿ ನೀಡಬೇಕೋ ಬೇಡವೋ ಎಂದು ಆಲೋಚನೆ ಮಾಡುತ್ತೇನೆ. ಸ್ನೇಹಿತ ಡಾ.ಚಂದ್ರಶೇಖರ್ ವಂಶವೃಕ್ಷೆ ಕಾದಂಬರಿಯನ್ನು ತಮಿಳಿಗೆ ಅನುವಾದ ಮಾಡಲು ನಲ್ಲತಂಬಿ ಬಂದಿದ್ದಾರೆ.ಬಹಳ ಚೆನ್ನಾಗಿ ಅನುವಾದ ಮಾಡುತ್ತಾರೆ. ಒಪ್ಪಿಗೆಕೊಡಿ ಎಂದು ಕೇಳಿದ್ದರು. ಅದಕ್ಕೆ ನಾನೂ ಒಪ್ಪಿದೆ ಇದೀಗ ತಮಿಳಿನಲ್ಲಿ ’ವಂಶವೃಕ್ಷಂ’ ಕೃತಿ ಬಂದಿರುವುದು ಸಂತೋಷವನ್ನುಂಟು ಮಾಡಿದೆ ಎಂದರು.

ಈ ಹಿಂದೆ ಹಿಂದೂ ಕಾನೂನುಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ನ್ಯಾಯಾಲಯದಲ್ಲಿ ವಾದ ಮತ್ತು ತೀರ್ಪು ನೀಡಲು ಮುಲ್ಲಾ ಆ್ಯಂಡ್ ಆಂಡ್ ಮುಲ್ಲಾ ಅವರ ಕೃತಿಯನ್ನು ವಕೀಲರು ಹಾಗೂ ನ್ಯಾಯಾಧೀಶರು ಅಧ್ಯಯನ ನಡೆಸುವ ಅಗತ್ಯವಿತ್ತು. ಆ ಕೃತಿ ಅಧ್ಯನದಿಂದ ಹೆಚ್ಚಿನ ಮಾಹಿತಿ ಸಿಗುತ್ತಿರಲಿಲ್ಲ. ವಂಶವೃಕ್ಷ ಕಾದಂಬರಿ ಓದಿದರೆ ಹಿಂದೂ ಕಾನೂನುಗಳು ಸರಿಯಾಗಿ ಅರ್ಥವಾಗುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಗೋವಿಂದ ಭಟ್ ಬೆಂಗಳೂರಿನಲ್ಲಿ ನಡೆದ ಮಾಡಿಕೊಳ್ಳಲು ಪಿ.ವಿ.ಕಾಣೆ ಅವರ ’ಹಿಸ್ಟರಿ ಆಫ್ ಧರ್ಮಶಾಸ್ತ್ರ’ ಪುಸ್ತಕ ಓದಬೇಕು.೧೦ ಸಂಪುಟಗಳನ್ನು ಬರೆಯಲು ೪೦ ವರ್ಷ ತೆಗೆದುಕೊಂಡರು ಎಂದು ಹೇಳಿದರು.

ಅನುವಾದಕ ಕೆ.ನಲ್ಲ ತಂಬಿ ಮಾತನಾಡಿ, ಡಾ.ಎಸ್.ಎಲ್.ಭೈರಪ್ಪ ಅವರ ವಂಶವೃಕ್ಷ ಕೃತಿ ಬಿಡುಗಡೆಯಾದ ೬೪ ವರ್ಷದ ನಂತರ ತಮಿಳಿಗೆ ಅನುವಾದವಾಗಿದೆ. ವಂಶವೃಕ್ಷಂ ನನ್ನ ೫೧ನೇ ಅನುವಾದಿತ ಕೃತಿಯಾಗಿದೆ. ಈ ಕೃತಿ ಬಿಡುಗಡೆ ಕಾರ್ಯಕ್ರಮ ನಾನು ಓದಿದ ಮೈಸೂರಿನಲ್ಲಿಯೇ ನಡೆದಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲೇಖಕ ಪಾವಣ್ಣನ್, ’ಝೀರೊ ಡಿಗ್ರಿ’ ಪ್ರಕಾಶನದ ರಾಮ್ ಜೀ ನರಸಿಂಹನ್ ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

2 hours ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

2 hours ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

2 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

3 hours ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

3 hours ago