ಮೈಸೂರು

ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ, ಅದು ಬದಲಾಗಬೇಕು : ಎಸ್‌.ಎಲ್‌.ಭೈರಪ್ಪ

ಮೈಸೂರು : ಸಾವ್ರಾಜ್ಯ ರಕ್ಷಣೆಗಾಗಿ ಬ್ರಿಟಿಷರು ಭಾರತೀಯರ ಇತಿಹಾಸ, ತತ್ವಶಾಸ್ತ್ರವನ್ನು ತಮಗೆ ಬೇಕಾದಂತೆ ಬರೆದುಕೊಂಡಿದ್ದು, ನಾವು ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ. ಅದು ಬದಲಾಗಬೇಕು ಎಂದು ಖ್ಯಾತ ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಹೇಳಿದರು.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಝೀರೊ ಡಿಗ್ರಿ ಪ್ರಕಾಶನದ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ತಮ್ಮ ವಂಶವೃಕ್ಷೆ ಕಾದಂಬರಿಯ ತಮಿಳು ಅವತರಣಿಕೆ ವಂಶವೃಕ್ಷಂ ಎಂಬ ಕೃತಿಯನ್ನು ಬಿಡುಗಡೆ ಮಾಡಿ ಅನುವಾದಕ ಕೆ.ನಲ್ಲ ತಂಬಿ ಅವರನ್ನು ಅಭಿನಂದಿಸಿ ಮಾತನಾಡಿ, ದೇಶದ ಎಲ್ಲ ಭಾಷೆಗಳಿಗೂ ನನ್ನ ಬಹುತೇಕ ಕಾದಂಬರಿಗಳು ಅನುವಾದಗೊಂಡಿದ್ದರೂ, ಇದುವರೆಗೂ ತಮಿಳು ಭಾಷೆಗೆ ಅನುವಾದ ಆಗಿರಲಿಲ್ಲ. ಬೇರೆ ಭಾಷೆಗೆ ನನ್ನ ಕೃತಿಯನ್ನು ಅನುವಾದ ಮಾಡಲು ನಾನು ತಕ್ಷಣಕ್ಕೆ ಅನುಮತಿ ಕೊಡುವುದಿಲ್ಲ. ಅನುಮತಿ ನೀಡಬೇಕೋ ಬೇಡವೋ ಎಂದು ಆಲೋಚನೆ ಮಾಡುತ್ತೇನೆ. ಸ್ನೇಹಿತ ಡಾ.ಚಂದ್ರಶೇಖರ್ ವಂಶವೃಕ್ಷೆ ಕಾದಂಬರಿಯನ್ನು ತಮಿಳಿಗೆ ಅನುವಾದ ಮಾಡಲು ನಲ್ಲತಂಬಿ ಬಂದಿದ್ದಾರೆ.ಬಹಳ ಚೆನ್ನಾಗಿ ಅನುವಾದ ಮಾಡುತ್ತಾರೆ. ಒಪ್ಪಿಗೆಕೊಡಿ ಎಂದು ಕೇಳಿದ್ದರು. ಅದಕ್ಕೆ ನಾನೂ ಒಪ್ಪಿದೆ ಇದೀಗ ತಮಿಳಿನಲ್ಲಿ ’ವಂಶವೃಕ್ಷಂ’ ಕೃತಿ ಬಂದಿರುವುದು ಸಂತೋಷವನ್ನುಂಟು ಮಾಡಿದೆ ಎಂದರು.

ಈ ಹಿಂದೆ ಹಿಂದೂ ಕಾನೂನುಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ನ್ಯಾಯಾಲಯದಲ್ಲಿ ವಾದ ಮತ್ತು ತೀರ್ಪು ನೀಡಲು ಮುಲ್ಲಾ ಆ್ಯಂಡ್ ಆಂಡ್ ಮುಲ್ಲಾ ಅವರ ಕೃತಿಯನ್ನು ವಕೀಲರು ಹಾಗೂ ನ್ಯಾಯಾಧೀಶರು ಅಧ್ಯಯನ ನಡೆಸುವ ಅಗತ್ಯವಿತ್ತು. ಆ ಕೃತಿ ಅಧ್ಯನದಿಂದ ಹೆಚ್ಚಿನ ಮಾಹಿತಿ ಸಿಗುತ್ತಿರಲಿಲ್ಲ. ವಂಶವೃಕ್ಷ ಕಾದಂಬರಿ ಓದಿದರೆ ಹಿಂದೂ ಕಾನೂನುಗಳು ಸರಿಯಾಗಿ ಅರ್ಥವಾಗುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಗೋವಿಂದ ಭಟ್ ಬೆಂಗಳೂರಿನಲ್ಲಿ ನಡೆದ ಮಾಡಿಕೊಳ್ಳಲು ಪಿ.ವಿ.ಕಾಣೆ ಅವರ ’ಹಿಸ್ಟರಿ ಆಫ್ ಧರ್ಮಶಾಸ್ತ್ರ’ ಪುಸ್ತಕ ಓದಬೇಕು.೧೦ ಸಂಪುಟಗಳನ್ನು ಬರೆಯಲು ೪೦ ವರ್ಷ ತೆಗೆದುಕೊಂಡರು ಎಂದು ಹೇಳಿದರು.

ಅನುವಾದಕ ಕೆ.ನಲ್ಲ ತಂಬಿ ಮಾತನಾಡಿ, ಡಾ.ಎಸ್.ಎಲ್.ಭೈರಪ್ಪ ಅವರ ವಂಶವೃಕ್ಷ ಕೃತಿ ಬಿಡುಗಡೆಯಾದ ೬೪ ವರ್ಷದ ನಂತರ ತಮಿಳಿಗೆ ಅನುವಾದವಾಗಿದೆ. ವಂಶವೃಕ್ಷಂ ನನ್ನ ೫೧ನೇ ಅನುವಾದಿತ ಕೃತಿಯಾಗಿದೆ. ಈ ಕೃತಿ ಬಿಡುಗಡೆ ಕಾರ್ಯಕ್ರಮ ನಾನು ಓದಿದ ಮೈಸೂರಿನಲ್ಲಿಯೇ ನಡೆದಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲೇಖಕ ಪಾವಣ್ಣನ್, ’ಝೀರೊ ಡಿಗ್ರಿ’ ಪ್ರಕಾಶನದ ರಾಮ್ ಜೀ ನರಸಿಂಹನ್ ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

10 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

17 mins ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

13 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

14 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

14 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

15 hours ago