ಮೈಸೂರು

ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ, ಅದು ಬದಲಾಗಬೇಕು : ಎಸ್‌.ಎಲ್‌.ಭೈರಪ್ಪ

ಮೈಸೂರು : ಸಾವ್ರಾಜ್ಯ ರಕ್ಷಣೆಗಾಗಿ ಬ್ರಿಟಿಷರು ಭಾರತೀಯರ ಇತಿಹಾಸ, ತತ್ವಶಾಸ್ತ್ರವನ್ನು ತಮಗೆ ಬೇಕಾದಂತೆ ಬರೆದುಕೊಂಡಿದ್ದು, ನಾವು ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ. ಅದು ಬದಲಾಗಬೇಕು ಎಂದು ಖ್ಯಾತ ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಹೇಳಿದರು.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಝೀರೊ ಡಿಗ್ರಿ ಪ್ರಕಾಶನದ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ತಮ್ಮ ವಂಶವೃಕ್ಷೆ ಕಾದಂಬರಿಯ ತಮಿಳು ಅವತರಣಿಕೆ ವಂಶವೃಕ್ಷಂ ಎಂಬ ಕೃತಿಯನ್ನು ಬಿಡುಗಡೆ ಮಾಡಿ ಅನುವಾದಕ ಕೆ.ನಲ್ಲ ತಂಬಿ ಅವರನ್ನು ಅಭಿನಂದಿಸಿ ಮಾತನಾಡಿ, ದೇಶದ ಎಲ್ಲ ಭಾಷೆಗಳಿಗೂ ನನ್ನ ಬಹುತೇಕ ಕಾದಂಬರಿಗಳು ಅನುವಾದಗೊಂಡಿದ್ದರೂ, ಇದುವರೆಗೂ ತಮಿಳು ಭಾಷೆಗೆ ಅನುವಾದ ಆಗಿರಲಿಲ್ಲ. ಬೇರೆ ಭಾಷೆಗೆ ನನ್ನ ಕೃತಿಯನ್ನು ಅನುವಾದ ಮಾಡಲು ನಾನು ತಕ್ಷಣಕ್ಕೆ ಅನುಮತಿ ಕೊಡುವುದಿಲ್ಲ. ಅನುಮತಿ ನೀಡಬೇಕೋ ಬೇಡವೋ ಎಂದು ಆಲೋಚನೆ ಮಾಡುತ್ತೇನೆ. ಸ್ನೇಹಿತ ಡಾ.ಚಂದ್ರಶೇಖರ್ ವಂಶವೃಕ್ಷೆ ಕಾದಂಬರಿಯನ್ನು ತಮಿಳಿಗೆ ಅನುವಾದ ಮಾಡಲು ನಲ್ಲತಂಬಿ ಬಂದಿದ್ದಾರೆ.ಬಹಳ ಚೆನ್ನಾಗಿ ಅನುವಾದ ಮಾಡುತ್ತಾರೆ. ಒಪ್ಪಿಗೆಕೊಡಿ ಎಂದು ಕೇಳಿದ್ದರು. ಅದಕ್ಕೆ ನಾನೂ ಒಪ್ಪಿದೆ ಇದೀಗ ತಮಿಳಿನಲ್ಲಿ ’ವಂಶವೃಕ್ಷಂ’ ಕೃತಿ ಬಂದಿರುವುದು ಸಂತೋಷವನ್ನುಂಟು ಮಾಡಿದೆ ಎಂದರು.

ಈ ಹಿಂದೆ ಹಿಂದೂ ಕಾನೂನುಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ನ್ಯಾಯಾಲಯದಲ್ಲಿ ವಾದ ಮತ್ತು ತೀರ್ಪು ನೀಡಲು ಮುಲ್ಲಾ ಆ್ಯಂಡ್ ಆಂಡ್ ಮುಲ್ಲಾ ಅವರ ಕೃತಿಯನ್ನು ವಕೀಲರು ಹಾಗೂ ನ್ಯಾಯಾಧೀಶರು ಅಧ್ಯಯನ ನಡೆಸುವ ಅಗತ್ಯವಿತ್ತು. ಆ ಕೃತಿ ಅಧ್ಯನದಿಂದ ಹೆಚ್ಚಿನ ಮಾಹಿತಿ ಸಿಗುತ್ತಿರಲಿಲ್ಲ. ವಂಶವೃಕ್ಷ ಕಾದಂಬರಿ ಓದಿದರೆ ಹಿಂದೂ ಕಾನೂನುಗಳು ಸರಿಯಾಗಿ ಅರ್ಥವಾಗುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಗೋವಿಂದ ಭಟ್ ಬೆಂಗಳೂರಿನಲ್ಲಿ ನಡೆದ ಮಾಡಿಕೊಳ್ಳಲು ಪಿ.ವಿ.ಕಾಣೆ ಅವರ ’ಹಿಸ್ಟರಿ ಆಫ್ ಧರ್ಮಶಾಸ್ತ್ರ’ ಪುಸ್ತಕ ಓದಬೇಕು.೧೦ ಸಂಪುಟಗಳನ್ನು ಬರೆಯಲು ೪೦ ವರ್ಷ ತೆಗೆದುಕೊಂಡರು ಎಂದು ಹೇಳಿದರು.

ಅನುವಾದಕ ಕೆ.ನಲ್ಲ ತಂಬಿ ಮಾತನಾಡಿ, ಡಾ.ಎಸ್.ಎಲ್.ಭೈರಪ್ಪ ಅವರ ವಂಶವೃಕ್ಷ ಕೃತಿ ಬಿಡುಗಡೆಯಾದ ೬೪ ವರ್ಷದ ನಂತರ ತಮಿಳಿಗೆ ಅನುವಾದವಾಗಿದೆ. ವಂಶವೃಕ್ಷಂ ನನ್ನ ೫೧ನೇ ಅನುವಾದಿತ ಕೃತಿಯಾಗಿದೆ. ಈ ಕೃತಿ ಬಿಡುಗಡೆ ಕಾರ್ಯಕ್ರಮ ನಾನು ಓದಿದ ಮೈಸೂರಿನಲ್ಲಿಯೇ ನಡೆದಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲೇಖಕ ಪಾವಣ್ಣನ್, ’ಝೀರೊ ಡಿಗ್ರಿ’ ಪ್ರಕಾಶನದ ರಾಮ್ ಜೀ ನರಸಿಂಹನ್ ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

59 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

5 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago