Mysore
30
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಸುತ್ತೂರು ಮಠಕ್ಕೆ ಜಗ್ಗಿ ವಾಸುದೇವ್‌ ಭೇಟಿ

Jaggi Vasudev visits Suttur Math

ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು.

ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಕಾರ್ಯದರ್ಶಿ ಮಂಜುನಾಥ್‌ ಅವರು ಮೈಸೂರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು.

ನಂತರ, ಸುತ್ತೂರುಶ್ರೀಗಳನ್ನು ಭೇಟಿ ಮಾಡಿದರು. ಜಗ್ಗಿ ವಾಸುದೇವ್ ಅವರಿಗೆ ಶಾಲು ಹೊದಿಸಿ ಫಲತಾಂಬೂಲ ನೀಡಿದರು. ಬಳಿಕ ಉಭಯ ಕುಶಲೋಪರಿ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಜಗ್ಗಿವಾಸುದೇವ್, ಇದೊಂದು ಸೌಜನ್ಯಯುತ ಭೇಟಿಯಾಗಿದೆ.

ಎರಡು ವರ್ಷಗಳಿಂದ ಸುತ್ತೂರು ಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೃದಯಘಾತಕ್ಕೆ ಒಳಗಾಗಿ ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶ್ರೀಗಳು ಬಂದು ಆರೋಗ್ಯ ವಿಚಾರಿಸಿದ್ದರು. ಅಲ್ಲಿಂದ ಬರಬೇಕೆಂದು ಅಂದು ಕೊಂಡರೂ ನಾನಾ ಕಾರಣಕ್ಕೆ ಬಂದಿರಲಿಲ್ಲ. ಈಗ ಬಂದಿರುವೆ ಎಂದರು.

Tags:
error: Content is protected !!