Jaggi Vasudev visits Suttur Math
ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು.
ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಕಾರ್ಯದರ್ಶಿ ಮಂಜುನಾಥ್ ಅವರು ಮೈಸೂರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು.
ನಂತರ, ಸುತ್ತೂರುಶ್ರೀಗಳನ್ನು ಭೇಟಿ ಮಾಡಿದರು. ಜಗ್ಗಿ ವಾಸುದೇವ್ ಅವರಿಗೆ ಶಾಲು ಹೊದಿಸಿ ಫಲತಾಂಬೂಲ ನೀಡಿದರು. ಬಳಿಕ ಉಭಯ ಕುಶಲೋಪರಿ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಜಗ್ಗಿವಾಸುದೇವ್, ಇದೊಂದು ಸೌಜನ್ಯಯುತ ಭೇಟಿಯಾಗಿದೆ.
ಎರಡು ವರ್ಷಗಳಿಂದ ಸುತ್ತೂರು ಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೃದಯಘಾತಕ್ಕೆ ಒಳಗಾಗಿ ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶ್ರೀಗಳು ಬಂದು ಆರೋಗ್ಯ ವಿಚಾರಿಸಿದ್ದರು. ಅಲ್ಲಿಂದ ಬರಬೇಕೆಂದು ಅಂದು ಕೊಂಡರೂ ನಾನಾ ಕಾರಣಕ್ಕೆ ಬಂದಿರಲಿಲ್ಲ. ಈಗ ಬಂದಿರುವೆ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…