Jaggi Vasudev visits Suttur Math
ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು.
ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಕಾರ್ಯದರ್ಶಿ ಮಂಜುನಾಥ್ ಅವರು ಮೈಸೂರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು.
ನಂತರ, ಸುತ್ತೂರುಶ್ರೀಗಳನ್ನು ಭೇಟಿ ಮಾಡಿದರು. ಜಗ್ಗಿ ವಾಸುದೇವ್ ಅವರಿಗೆ ಶಾಲು ಹೊದಿಸಿ ಫಲತಾಂಬೂಲ ನೀಡಿದರು. ಬಳಿಕ ಉಭಯ ಕುಶಲೋಪರಿ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಜಗ್ಗಿವಾಸುದೇವ್, ಇದೊಂದು ಸೌಜನ್ಯಯುತ ಭೇಟಿಯಾಗಿದೆ.
ಎರಡು ವರ್ಷಗಳಿಂದ ಸುತ್ತೂರು ಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೃದಯಘಾತಕ್ಕೆ ಒಳಗಾಗಿ ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶ್ರೀಗಳು ಬಂದು ಆರೋಗ್ಯ ವಿಚಾರಿಸಿದ್ದರು. ಅಲ್ಲಿಂದ ಬರಬೇಕೆಂದು ಅಂದು ಕೊಂಡರೂ ನಾನಾ ಕಾರಣಕ್ಕೆ ಬಂದಿರಲಿಲ್ಲ. ಈಗ ಬಂದಿರುವೆ ಎಂದರು.
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…