ಮೈಸೂರು

ಮೈಸೂರಲ್ಲಿ ಜೈಲರ್-‌2 ಶೂಟಿಂಗ್‌ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ.

ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ ಏನೋ ಅವರ ಒಂದಷ್ಟು ಸಿನಿಮಾಗಳು ಕರ್ನಾಟಕದಲ್ಲಿ ಚಿತ್ರೀಕರಣ ಆಗುತ್ತವೆ. ವಿಶೇಷವೆಂದರೆ, ಈ ಹಿಂದೆ ಇದೇ ಹುಲ್ಲೇನಹಳ್ಳಿಯಲ್ಲಿ ವರನಟ ಡಾ. ರಾಜ್‌ಕುಮಾರ್ ಅವರ ಸಿನಿಮಾದ ಚಿತ್ರೀಕರಣ ನಡೆದಿತ್ತು.

ಸದ್ಯದ ಮಾಹಿತಿ ಪ್ರಕಾರ, ಬಿಳಿಕೆರೆಯ ಹುಲ್ಲೇನಹಳ್ಳಿಯ ಸೇತುವೆ ಮೇಲೆ ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಮೂರು ದಿನಗಳ ಕಾಲ ಇದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಾಗುತ್ತದೆ ಎನ್ನುತ್ತವೆ ಚಿತ್ರತಂಡದ ಮೂಲಗಳು.

ಚಿತ್ರೀಕರಣ ನಡೆಯುತ್ತಿರುವ ವಿಚಾರ ತಿಳಿದು, ರಜನಿಕಾಂತ್ ಅವರನ್ನು ನೋಡಲು ಈಗಾಗಲೇ ಅನೇಕರು ಚಿತ್ರೀಕರಣ ಸ್ಥಳದ ಕಡೆಗೆ ಮುಗಿಬಿದ್ದು ಹೋಗುತ್ತಿದ್ದಾರೆ. ಇನ್ನೂ ಮೂರು ದಿನಗಳ ಕಾಲ ರಜನಿಕಾಂತ್ ಅವರು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಚಿತ್ರೀಕರಣ ಸ್ಥಳದ ಬಳಿ ರಜನಿಕಾಂತ್ ಅವರು ಓಡಾಡುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದಿನ ಜೈಲರ್ ಸಿನಿಮಾದ ಗೆಟಪ್‌ನಲ್ಲಿಯೇ ರಜನಿಕಾಂತ್ ವೈರಲ್‌ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

2023ರಲ್ಲಿ ತೆರೆಕಂಡ ಜೈಲರ್ ಸಿನಿಮಾವು ಬಾಕ್ಸ್ ಆಫೀಸ್ ಉಡೀಸ್ ಮಾಡಿತ್ತು. ಆ ಹಿನ್ನೆಲೆಯಲ್ಲಿ ಸನ್ ಪಿಕ್ಚರ್ಸ್ ಸಂಸ್ಥೆಯು ಇದೀಗ ಅದರ ಪಾರ್ಟ್ 2 ಮಾಡುವುದಕ್ಕೆ ಮುಂದಾಗಿದೆ. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಈ ಬಾರಿ ಜೈಲರ್ ಸಿನಿಮಾದ ಮುಂದುವರಿದ ಭಾಗವನ್ನ ತೆರೆಮೇಲೆ ತರಲು ಸಜ್ಜಾಗಿದ್ದಾರೆ.

ಜೈಲರ್‌ ನಲ್ಲಿ ನರಸಿಂಹನ ಪಾತ್ರ ಮಾಡಿದ್ದ ಶಿವರಾಜ್‌ಕುಮಾರ್ ಅವರು ಪಾರ್ಟ್-2 ರಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ತೆಲುಗು ನಟ ನಂದಮೂರಿ ಬಾಲಕೃಷ್ಣ ಕೂಡ ಜೈಲರ್‌ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನೂ ಮೊದಲ ಪಾರ್ಟ್‌ ಜೈಲರ್‌ ಸಿನಿಮಾ ಕೂಡ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

2 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

2 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

3 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

3 hours ago