ಮೈಸೂರು

ಮೈಸೂರಲ್ಲಿ ಜೈಲರ್-‌2 ಶೂಟಿಂಗ್‌ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ.

ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ ಏನೋ ಅವರ ಒಂದಷ್ಟು ಸಿನಿಮಾಗಳು ಕರ್ನಾಟಕದಲ್ಲಿ ಚಿತ್ರೀಕರಣ ಆಗುತ್ತವೆ. ವಿಶೇಷವೆಂದರೆ, ಈ ಹಿಂದೆ ಇದೇ ಹುಲ್ಲೇನಹಳ್ಳಿಯಲ್ಲಿ ವರನಟ ಡಾ. ರಾಜ್‌ಕುಮಾರ್ ಅವರ ಸಿನಿಮಾದ ಚಿತ್ರೀಕರಣ ನಡೆದಿತ್ತು.

ಸದ್ಯದ ಮಾಹಿತಿ ಪ್ರಕಾರ, ಬಿಳಿಕೆರೆಯ ಹುಲ್ಲೇನಹಳ್ಳಿಯ ಸೇತುವೆ ಮೇಲೆ ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಮೂರು ದಿನಗಳ ಕಾಲ ಇದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಾಗುತ್ತದೆ ಎನ್ನುತ್ತವೆ ಚಿತ್ರತಂಡದ ಮೂಲಗಳು.

ಚಿತ್ರೀಕರಣ ನಡೆಯುತ್ತಿರುವ ವಿಚಾರ ತಿಳಿದು, ರಜನಿಕಾಂತ್ ಅವರನ್ನು ನೋಡಲು ಈಗಾಗಲೇ ಅನೇಕರು ಚಿತ್ರೀಕರಣ ಸ್ಥಳದ ಕಡೆಗೆ ಮುಗಿಬಿದ್ದು ಹೋಗುತ್ತಿದ್ದಾರೆ. ಇನ್ನೂ ಮೂರು ದಿನಗಳ ಕಾಲ ರಜನಿಕಾಂತ್ ಅವರು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಚಿತ್ರೀಕರಣ ಸ್ಥಳದ ಬಳಿ ರಜನಿಕಾಂತ್ ಅವರು ಓಡಾಡುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದಿನ ಜೈಲರ್ ಸಿನಿಮಾದ ಗೆಟಪ್‌ನಲ್ಲಿಯೇ ರಜನಿಕಾಂತ್ ವೈರಲ್‌ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

2023ರಲ್ಲಿ ತೆರೆಕಂಡ ಜೈಲರ್ ಸಿನಿಮಾವು ಬಾಕ್ಸ್ ಆಫೀಸ್ ಉಡೀಸ್ ಮಾಡಿತ್ತು. ಆ ಹಿನ್ನೆಲೆಯಲ್ಲಿ ಸನ್ ಪಿಕ್ಚರ್ಸ್ ಸಂಸ್ಥೆಯು ಇದೀಗ ಅದರ ಪಾರ್ಟ್ 2 ಮಾಡುವುದಕ್ಕೆ ಮುಂದಾಗಿದೆ. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಈ ಬಾರಿ ಜೈಲರ್ ಸಿನಿಮಾದ ಮುಂದುವರಿದ ಭಾಗವನ್ನ ತೆರೆಮೇಲೆ ತರಲು ಸಜ್ಜಾಗಿದ್ದಾರೆ.

ಜೈಲರ್‌ ನಲ್ಲಿ ನರಸಿಂಹನ ಪಾತ್ರ ಮಾಡಿದ್ದ ಶಿವರಾಜ್‌ಕುಮಾರ್ ಅವರು ಪಾರ್ಟ್-2 ರಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ತೆಲುಗು ನಟ ನಂದಮೂರಿ ಬಾಲಕೃಷ್ಣ ಕೂಡ ಜೈಲರ್‌ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನೂ ಮೊದಲ ಪಾರ್ಟ್‌ ಜೈಲರ್‌ ಸಿನಿಮಾ ಕೂಡ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago