ಮೈಸೂರು

ಭೀಮನಕೊಲ್ಲಿಯಲ್ಲಿ ಜಾತ್ರಾ ಮಹೋತ್ಸವದ ಸಂಭ್ರಮ: ದಾಸೋಹ ಭವನಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಭೇಟಿ

ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು ಇಂದು ದೇವಸ್ಥಾನದ ತಾತ್ಕಾಲಿಕ ಆಸ್ಪತ್ರೆ, ದಾಸೋಹ ಭವನಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆ ಯಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ತೆಗೆದು ಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಿದರು.

ಬಳಿಕ ಜಾತ್ರೆಯಲ್ಲಿ ತಿಂಡಿ ತಿನಿಸುಗಳನ್ನು ಮಾರಾಟ ಮಾರುವವರು ಶುದ್ಧವಾದ ತಿಂಡಿಗಳನ್ನು ಮಾರಾಟ ಮಾಡಬೇಕು. ಹಣ್ಣುಗಳನ್ನು ಕೊಯ್ದು ಮಾರಾಟ ಮಾಡುವವರು ಮುಚ್ಚಿಕೊಂಡು ಮಾರಾಟ ಮಾಡಬೇಕು. ಹಣ್ಣುಗಳ ಮೇಲೆ ನೊಣಗಳು ಮತ್ತು ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಬಳಿಕ ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತಾದಿಗಳಿಗೆ ಶುದ್ಧವಾದ ಆಹಾರವನ್ನು ನೀಡಬೇಕು. ಅಡುಗೆ ಮಾಡುವಾಗ ಪಾತ್ರೆಗಳನ್ನು ಶುದ್ಧವಾಗಿ ತೊಳೆದುಕೊಳ್ಳಬೇಕು ಹಾಗೂ ಸೊಪ್ಪು ತರಕಾರಿಗಳನ್ನು ಶುದ್ಧವಾದ ನೀರಿನಿಂದ ತೊಳೆಯಬೇಕು. ಹಾಗೂ ಅಡುಗೆ ತಯಾರಾದ ನಂತರ ಅದನ್ನು ಮುಚ್ಚಿಡಬೇಕು ಎಂದು ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago