ಮೈಸೂರು: ಕನ್ನಡ ಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಇರುವ ಹಿನ್ನೆಲೆ ಈ ಬಂದ್ಗೆ ಕಾವೇರಿ ಕ್ರಿಯಾ ಸಮಿತಿಯೂ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಜಯಪ್ರಕಾಶ್(ಜೆಪಿ) ತಿಳಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳಿನ ಬಂದ್ಗೆ ಎಲ್ಲರ ಸಹಕಾರ ಮುಖ್ಯವಾಗಿದೆ. ನಾಳೆ ಕರ್ನಾಟಕದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ಗಂಟೆಯ ವರಗೆ ಬಂದ್ ಇರಲಿದೆ. ಅಲ್ಲದೇ ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಬಂದ್ ಮಾಡುತ್ತೇವೆ. ಹೀಗಾಗಿ ಕಾವೇರಿ ಕ್ರಿಯಾ ಸಮಿತಿಯಿಂದ ಸಹಕಾರಕ್ಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.
ಈ ಬಂದ್ಗೆ ಚಿತ್ರ ನಟ ನಟಿಯರು ಭಾಗಿಯಾಗಿ ಒಗ್ಗಟ್ಟನ್ನು ಪ್ರದರ್ಶಿಸಬೇಕಿದೆ. ಅದಕ್ಕೆ ಚಿತ್ರರಂಗದ ನಟ ನಟಿಯರು, ಸಂಘಟನೆಗಳು ಬೆಂಬಲ ನೀಡಬೇಕು. ಅಲ್ಲದೇ ಅಂಗಡಿ ಮುಂಗಟ್ಟು ಸೇರಿದಂತೆ ಎಲ್ಲರಲ್ಲೂ ಕೈ ಮುಗಿದು ಮನವಿ ಮಾಡಿ ವಿಡಿಯೋ ಮಾಡಿಕೊಳ್ಳುತ್ತೇವೆ. ಹಾಗಾಗಿ ಎಲ್ಲರೂ ನಾಳಿನ ಬಂದ್ಗೆ ಬೆಂಬಲ ನೀಡಬೇಕು ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…