ಮೈಸೂರು

ಜೆಡಿಎಸ್‌ ತೋರೆಯುತ್ತಾರಾ ಜಿ.ಟಿ ದೇವೇಗೌಡ..? ಈ ಬಗ್ಗೆ ಸ್ವತಃ ಅವರೇ ಹೇಳಿದ್ದೇನು..

ಮೈಸೂರು : ಯಾವ ನಾಯಕರು ನನ್ನನ್ನು ಯಾವ ಪಕ್ಷಕ್ಕೂ ಆಹ್ವಾನಿಸಿಲ್ಲ. ನಾನು ಕಾಂಗ್ರೆಸ್‌ಗೆ ಹೋಗ್ಬೇಕಾ, ಬಿಜೆಪಿಗೆ ಹೋಗ್ಬೇಕಾ ಎಂದು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ. ನಾನು ಪಕ್ಷಾಂತರ ಮಾಡಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಂದುಬಿಡು ಕಾಂಗ್ರೆಸ್‌ಗೆ ಅಂತ ಕರೆದಿಲ್ಲ, ಶಿವಕುಮಾರ್ ಕೂಡ ಕರೆದಿಲ್ಲ, ಚನ್ನಪಟ್ಟಣ ಬೈ ಎಲೆಕ್ಷನಲ್ಲಿ ನನ್ನ ಯಾರು ಕರೆದಿಲ್ಲ, ಹಾಗಂತ ನಾನು ಯಾವ ಪಕ್ಷಕ್ಕೂ ಕೂಡ ಹೋಗಲ್ಲ ಎಂದರು.

ಮುಂದಿನ ಚುನಾವಣೆಯಲ್ಲಿ ಸರ್ಧೆ ಖಚಿತ: ನನ್ನ ಮುಂದೆ ನಿಲ್ಲುವ ಶಕ್ತಿ ಇಲ್ಲದವರು, ನಿನ್ನೆ ಮೊನ್ನೆ ಬಂದ ಶಾಸಕರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸ್ವ ಪಕ್ಷದವರ ಬಗ್ಗಯೇ ಹರಿಹಾಯ್ದ ಜಿಟಿಡಿ, ದೇವೇಗೌಡರ ಜೊತೆ ಬಾವುಟ ಕಟ್ಟಿ ಪಕ್ಷ ಕಟ್ಟಿದವನು ನಾನು.

ಮುಂದೆ ಏನು ಮಾಡ್ಬೇಕು ಅಂತ ಕ್ಷೇತ್ರದ ಹೇಳ್ತಾರೆ. ಜನ ಜೆಡಿಎಸ್ ಅಲ್ಲಿ ಇರು ಅಂದ್ರೆ ಇರ್ತೀನಿ, ಕಾಂಗ್ರೆಸ್ ಗೆ ಹೋಗಿ ಅಂದ್ರೆ ಹೋಗ್ತೀನಿ, ಬಿಜೆಪಿಗೆ ಹೋಗು ಅಂದ್ರು ಹೋಗ್ತೀನಿ. ಆದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

14 mins ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

19 mins ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

24 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

37 mins ago

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

45 mins ago

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

2 hours ago