ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬುಧುವಾರ ನೂತನ ಜಿಲ್ಲಾಧಿಕಾರಿ ಬಳಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಸಚಿವ ಸಾ ರಾ ಮಹೇಶ್ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಜೆಡಿಎಸ್ ಕಾರ್ಯಕರ್ತರು ಪೆನ್ ಡ್ರೈವ್ ಹಂಚಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ಮೇಲೆ ಸೂಕ್ತ ಕ್ರಮಕ್ಕಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಹಾಸನ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಹಂಚಿಕೆ ರೂವಾರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ದಿಕ್ಕಾರದ ಘೋಷಣೆ ಕೂಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪೆನ್ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ ಟಿ ದೇವೇಗೌಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಹಂಚಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡಬೇಕು. ಪೆನ್ ಡ್ರೈವ್ ಹಂಚಿಕೆಯಾಗಿರುವುದರ ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ದೂರಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕುಟುಂಬಕ್ಕೆ ಕಳಂಕ ತರಲು ಈ ರೀತಿಯ ಷಡ್ಯಂತ್ರ ಮಾಡಲಾಗಿದೆ ಎಂದು ಆರೋಪಿಸಿದರು.
ಪ್ರಕರಣದ ಸಂತ್ರಸ್ತೆಯನ್ನ ಇಲ್ಲಿವರಗೆ ಯಾಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿಲ್ಲ.? ಯಾಕೆ ಇನ್ನೂ ಸ್ಥಳ ಮಹಜರು ಮಾಡಿಲ್ಲ ಎಂದು ಪ್ರಶ್ನಿಸಿದರು. ರಾಜಕೀಯ ದುರುದ್ದೇಶದಿಂದ ನಮ್ಮ ಪ್ರಾದೇಶಿಕ ಪಕ್ಷವನ್ನ ಮುಗಿಸುವ ಹುನ್ನಾರದಿಂದ ಸಿಎಂ ಹಾಗೂ ಡಿಸಿಎಂ ಎಸ್ಐಟಿ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಏನೂ ಮಾತನಾಡಲ್ಲ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಆದರೆ ಪೆನ್ ಡ್ರೈವ್ ವನ್ನು ಹಂಚಿಕೆ ಮಾಡಿ ನೂರಾರು ಮಹಿಳೆಯರ ಮಾನ ಹಾರಾಜು ಹಾಕಿರುವುದು ಅಕ್ಷಮ್ಯ ಅಪರಾಧ. ಇದರ ಬಗ್ಗೆಯೂ ಕೂಡ ಸೂಕ್ತ ತನಿಖೆ ಆಗಬೇಕು. ಪ್ರಕರಣ ಪಿತಾಮಹ ಯಾರು ಎಂದು ಬಯಲಿಗೆ ಬರಬೇಕು. ಹಾಗಾಗಿ ಪೆನ್ ಡ್ರೈವ್ ಹಂಚಿಕೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೈಸೂರು ಜಿಲ್ಲಾ ಜೆಡಿಎಸ್ ಒತ್ತಾಯಿಸಿ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರಿಗೆ ಸಲ್ಲಿಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…