ಮೈಸೂರು : ನಗರದೆಲ್ಲೆ ನಡೆಯುತ್ತಿರುವ ಜೆಡಿಎಸ್ ಕಾರ್ಯಗಾರದಲ್ಲಿ ಭಾಗವಹಿಸಿದ ದೇವೇಗೌಡ, ಇದೇ ಸಂದರ್ಭದಲ್ಲಿ ನಗರದ ವಿವಿ ಮೊಹಲ್ಲಾದಲ್ಲಿರುವ ಜಿ.ಟಿ.ದೇವೇಗೌಡ ನಿವಾಸಕ್ಕೆ ಇಂದು(ಅಕ್ಟೋಬರ್ 20) ಅಚ್ಚರಿ ಭೇಟಿ ನೀಡಿದರು. ಈ ಮೂಲಕ ಜಿಟಿಡಿಯನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ದೇವೇಗೌಡ ಈ ಅಸ್ತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಇನ್ನು ಮನೆಗೆ ಬಂದ ಎಚ್.ಡಿ. ದೇವೇಗೌಡರನ್ನು ಜಿಟಿಡಿ ಕುಟುಂಬ ಪ್ರೀತಿಯಿಂದ ಬರ ಮಾಡಿಕೊಂಡಿದೆ.
ರಾಜಕೀಯ ನಿಲುವು ಪ್ರಕಟಿಸಿದ ಜಿಟಿಡಿ
ಎಚ್ಡಿಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಜೆಡಿಎಸ್ ಬಿಟ್ಟು ಹೋಗಲ್ಲ. ಎಲ್ಲ ಪಕ್ಷದವರೂ ನನ್ನನ್ನ ಕರೆದಿದ್ದಾರೆ, ದಯವಿಟ್ಟು ನನ್ನ ಕ್ಷಮಿಸಿ. ಕಾಂಗ್ರೆಸ್ನಿಂದ ಸಿದ್ದರಾಮಯ್ಯನವರೂ ನನ್ನನ್ನು ಕರೆದಿದ್ದಾರೆ. ಬಿಜೆಪಿಯವರೂ ನನಗೆ ಬಂದು ಬಿಡಿ ಎಂದು ಹೇಳಿದ್ದಾರೆ. ಆದರೆ ನಾವು JDS ಪಕ್ಷದಿಂದ ನಾವು ಬೆಳೆದಿದ್ದೇವೆ. ಜೆಡಿಎಸ್ ಪಕ್ಷವನ್ನ ಕಟ್ಟುವುದೇ ನಮ್ಮ ಗುರಿ ಎಂದ ಜಿಟಿಡಿ ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್, ಬಿಜೆಪಿ ಸೇರುವ ವದಂತಿಗಳಿಗೆ ತೆರೆ ಎಳೆದರು. ಅಲ್ಲದೇ ನಮ್ಮ ಪಕ್ಷಕ್ಕೆ ಬರ್ತಾರೆ ಎಂದು ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಭಾರೀ ನಿರಾಸೆಯಾಗಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…