ಮೈಸೂರು : ನಗರದೆಲ್ಲೆ ನಡೆಯುತ್ತಿರುವ ಜೆಡಿಎಸ್ ಕಾರ್ಯಗಾರದಲ್ಲಿ ಭಾಗವಹಿಸಿದ ದೇವೇಗೌಡ, ಇದೇ ಸಂದರ್ಭದಲ್ಲಿ ನಗರದ ವಿವಿ ಮೊಹಲ್ಲಾದಲ್ಲಿರುವ ಜಿ.ಟಿ.ದೇವೇಗೌಡ ನಿವಾಸಕ್ಕೆ ಇಂದು(ಅಕ್ಟೋಬರ್ 20) ಅಚ್ಚರಿ ಭೇಟಿ ನೀಡಿದರು. ಈ ಮೂಲಕ ಜಿಟಿಡಿಯನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ದೇವೇಗೌಡ ಈ ಅಸ್ತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಇನ್ನು ಮನೆಗೆ ಬಂದ ಎಚ್.ಡಿ. ದೇವೇಗೌಡರನ್ನು ಜಿಟಿಡಿ ಕುಟುಂಬ ಪ್ರೀತಿಯಿಂದ ಬರ ಮಾಡಿಕೊಂಡಿದೆ.
ರಾಜಕೀಯ ನಿಲುವು ಪ್ರಕಟಿಸಿದ ಜಿಟಿಡಿ
ಎಚ್ಡಿಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಜೆಡಿಎಸ್ ಬಿಟ್ಟು ಹೋಗಲ್ಲ. ಎಲ್ಲ ಪಕ್ಷದವರೂ ನನ್ನನ್ನ ಕರೆದಿದ್ದಾರೆ, ದಯವಿಟ್ಟು ನನ್ನ ಕ್ಷಮಿಸಿ. ಕಾಂಗ್ರೆಸ್ನಿಂದ ಸಿದ್ದರಾಮಯ್ಯನವರೂ ನನ್ನನ್ನು ಕರೆದಿದ್ದಾರೆ. ಬಿಜೆಪಿಯವರೂ ನನಗೆ ಬಂದು ಬಿಡಿ ಎಂದು ಹೇಳಿದ್ದಾರೆ. ಆದರೆ ನಾವು JDS ಪಕ್ಷದಿಂದ ನಾವು ಬೆಳೆದಿದ್ದೇವೆ. ಜೆಡಿಎಸ್ ಪಕ್ಷವನ್ನ ಕಟ್ಟುವುದೇ ನಮ್ಮ ಗುರಿ ಎಂದ ಜಿಟಿಡಿ ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್, ಬಿಜೆಪಿ ಸೇರುವ ವದಂತಿಗಳಿಗೆ ತೆರೆ ಎಳೆದರು. ಅಲ್ಲದೇ ನಮ್ಮ ಪಕ್ಷಕ್ಕೆ ಬರ್ತಾರೆ ಎಂದು ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಭಾರೀ ನಿರಾಸೆಯಾಗಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…