ಮೈಸೂರು

JDS | ರಾಜಕೀಯ ಸಮಿತಿಗೆ ಸಾ.ರಾ.ಮಹೇಶ್‌ ನೇಮಕ

ಮೈಸೂರು : ಜಾ.ದಳದ ರಾಜಕೀಯ ವ್ಯವಹಾರಗಳ ಸಮಿತಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ನೇಮಿಸಲಾಗಿದೆ.

ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ರಚನೆ ಮಾಡಿದ್ದಾರೆ. ಪಕ್ಷದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಮಹತ್ವದ ವಿಷಯಗಳ ಮೇಲೆ ಸಮಿತಿ ನಿರ್ಣಯಗಳನ್ನು ಕೈಗೊಳ್ಳಲಿದೆ.

ಕುಮಾರಸ್ವಾಮಿ ನೇತೃತ್ವದ ಈ ಸಮಿತಿಯಲ್ಲಿ ಶಾಸಕಿ ಶಾರದಾ ಪೂರ‍್ಯಾನಾಯಕ್ ಸಂಚಾಲಕರಾಗಿದ್ದು, ಮಾಜಿ ಸಚಿವ ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಜಾ.ದಳ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಜಾ.ದಳ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇದನ್ನು ಓದಿ : 13 ವರ್ಷಗಳ ನಂತರ ತಮಿಳು ಸಿನಿಮಾಗೆ ಎಂಟ್ರಿ ಕೊಟ್ಟಾ ಮೇಘನಾ ರಾಜ್‌

ಈ ಸಮಿತಿಯು ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ಪಕ್ಷ ಸಂಘಟನೆ, ಬಲವರ್ಧನೆ, ನಾಯಕತ್ವವನ್ನು ರೂಪಿಸುವುದರಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ರೀತಿಯ ಕ್ರಮ ಕೈಗೊಳ್ಳಲಿದೆ.

ಪ್ರಚಲಿತದಲ್ಲಿರುವ ಸೂಕ್ಷ್ಮಹಾಗೂ ಕ್ಲಿಷ್ಟ ಸಮಸ್ಯೆಗಳನ್ನು ಅವಲೋಕಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಿಗೆ ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಪ್ರಣಾಳಿಕೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಿದೆ. ಅಲ್ಲದೇ, ಎನ್‌ಡಿಎ ಮೈತ್ರಿಕೂಟದ ಹಿತದೃಷ್ಟಿಯಿಂದ ಹೊಂದಾಣಿಕೆ ಮತ್ತು ಸಮನ್ವಯತೆಗೆ ಕಾರ್ಯಕ್ರಮ ರೂಪಿಸುವುದರ ಜೊತೆಗೆ ಕನಿಷ್ಠ ೩ ತಿಂಗಳಿಗೊಮ್ಮೆ ಸಭೆ ಸೇರಿ ಮಹತ್ವದ ವಿಷಯಗಳ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

45 mins ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

5 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

5 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

5 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

6 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

6 hours ago