ಮೈಸೂರು

JDS | ರಾಜಕೀಯ ಸಮಿತಿಗೆ ಸಾ.ರಾ.ಮಹೇಶ್‌ ನೇಮಕ

ಮೈಸೂರು : ಜಾ.ದಳದ ರಾಜಕೀಯ ವ್ಯವಹಾರಗಳ ಸಮಿತಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ನೇಮಿಸಲಾಗಿದೆ.

ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ರಚನೆ ಮಾಡಿದ್ದಾರೆ. ಪಕ್ಷದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಮಹತ್ವದ ವಿಷಯಗಳ ಮೇಲೆ ಸಮಿತಿ ನಿರ್ಣಯಗಳನ್ನು ಕೈಗೊಳ್ಳಲಿದೆ.

ಕುಮಾರಸ್ವಾಮಿ ನೇತೃತ್ವದ ಈ ಸಮಿತಿಯಲ್ಲಿ ಶಾಸಕಿ ಶಾರದಾ ಪೂರ‍್ಯಾನಾಯಕ್ ಸಂಚಾಲಕರಾಗಿದ್ದು, ಮಾಜಿ ಸಚಿವ ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಜಾ.ದಳ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಜಾ.ದಳ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇದನ್ನು ಓದಿ : 13 ವರ್ಷಗಳ ನಂತರ ತಮಿಳು ಸಿನಿಮಾಗೆ ಎಂಟ್ರಿ ಕೊಟ್ಟಾ ಮೇಘನಾ ರಾಜ್‌

ಈ ಸಮಿತಿಯು ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ಪಕ್ಷ ಸಂಘಟನೆ, ಬಲವರ್ಧನೆ, ನಾಯಕತ್ವವನ್ನು ರೂಪಿಸುವುದರಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ರೀತಿಯ ಕ್ರಮ ಕೈಗೊಳ್ಳಲಿದೆ.

ಪ್ರಚಲಿತದಲ್ಲಿರುವ ಸೂಕ್ಷ್ಮಹಾಗೂ ಕ್ಲಿಷ್ಟ ಸಮಸ್ಯೆಗಳನ್ನು ಅವಲೋಕಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಿಗೆ ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಪ್ರಣಾಳಿಕೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಿದೆ. ಅಲ್ಲದೇ, ಎನ್‌ಡಿಎ ಮೈತ್ರಿಕೂಟದ ಹಿತದೃಷ್ಟಿಯಿಂದ ಹೊಂದಾಣಿಕೆ ಮತ್ತು ಸಮನ್ವಯತೆಗೆ ಕಾರ್ಯಕ್ರಮ ರೂಪಿಸುವುದರ ಜೊತೆಗೆ ಕನಿಷ್ಠ ೩ ತಿಂಗಳಿಗೊಮ್ಮೆ ಸಭೆ ಸೇರಿ ಮಹತ್ವದ ವಿಷಯಗಳ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago