Categories: ಮೈಸೂರು

ಜೆಡಿಎಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ರಾಜಕಾರಣವನ್ನೇ ಬಿಡುವೆ ಎಂದ ಜಿಟಿ ದೇವೇಗೌಡ

ಮೈಸೂರು: ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಶಾಸಕ ಸಾರಾ ಮಹೇಶ್‌ ನಡುವಿನ ಆರೋಪ- ಪ್ರತ್ಯಾರೋಪಗಳು ತಾರಕ್ಕಕ್ಕೇರಿವೆ.

ʻಜಿಟಿಡಿ ಅವರನ್ನು ದೇವೇಗೌಡರು ಕರೆ ಮಾಡಿ ಕರೆದಿದ್ದರುʼ ಎಂಬ ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿಕೆಗೆ ಸೋಮವಾರ ತಿರುಗೇಟು ನೀಡಿದ ಜಿಟಿ ದೇವೇಗೌಡರು, ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ಬರುವಂತೆ ಎಚ್‌.ಡಿ ದೇವೇಗೌಡರು ನನ್ನ ಕರೆದಿಲ್ಲ. ಕರೆದಿದ್ದೆ ಎಂದು ಅವರು ಹೇಳಿದರೆ, ನಾನು ಅಂದೇ ರಾಜಕಾರಣ ಬಿಟ್ಟು ಬಿಡುತ್ತೇನೆ ಎಂದರು.

ಸಾ.ರಾ ಮಹೇಶ್‌ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಪ್ರಮಾಣ ಮಾಡುತ್ತೇನೆ ಚಾಮುಂಡಿಬೆಟ್ಟಕ್ಕೆ ಬಾ, ಅಲ್ಲಿಗೆ ಬಾ ಅಂದರೆ ಹೋಗಲಾಗುತ್ತದೆಯೇ? ಎಂದು ಖಾರವಾಗಿ ಕೇಳಿದರು.

ಈ ಹಿಂದೆ ವಿಶ್ವಾನಾಥ್‌ ಜೊತೆ ಒಂದು ಬಾರಿ ಚಾಮುಂಡಿಬೆಟ್ಟಕ್ಕೆ ಹೋಗಿದ್ದಕ್ಕೆ ಏನಾಯಿತು ಎಂಬುದನ್ನು ಅವರ ನೆನಪಿನಲ್ಲಡಲಿ ಅವರಿಗಾದ ಹಾಗೇ ನನಗೂ ಹಾಗಬೇಕಾ ಎಂದು ವಾಗ್ದಾಳಿ ನಡೆಸಿದರು.

ಮುಂದುವರಿದು ಮಾತನಾಡುತ್ತಾ, ನಾನು ಯಾರ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ಆಗತ್ಯ ಇಲ್ಲ. ಯಾರ ಬೆಂಬಲವಿಲ್ಲದೆಯೂ ಸ್ವಂತವಾಗಿ ನನಗೆ ರಾಜಕೀಯ ಮಾಡುವುದು ಗೊತ್ತು, ಸ್ವಂತ ರಾಜಕೀಯದಿಂದ ಇಲ್ಲಿಯವರೆಗೆ ಬಂದಿದ್ದೇನೆ ಯಾರ ಕತ್ತನ್ನು ಕೊಯ್ದಿಲ್ಲ ಎಂದು ಹೇಳಿದರು.

ಜೆಡಿಎಸ್‌ನಿಂದ ನನಗೆ ಹಲವು ಬಾರಿ ನೋವಾಗಿದೆ ಇದು ಹೊಸದೇನಲ್ಲ. ಪದೇ ಪದೇ ನೋವಾಗುವುದು ನನಗೆ ಕರಗತವಾಗಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಇನ್ನು ಸಿಎಂ ಇಬ್ರಾಹಿಂ ಭೇಟಿಯ ಕುರಿತು ಪ್ರತಿಕ್ರಿಯಿಸಿ ಜಿಟಿಡಿ, ಇಬ್ರಾಹಿಂಗೆ ಪ್ರಾದೇಶಿಕ ಪಕ್ಷ ಕಟ್ಟಬೇಕು ಅಂಬ ಆಸೆ ಇದೆ ಈ ಕುರಿತು ನನ್ನ ಜೊತೆ ಚರ್ಚಿಸಿದ್ದಾರೆ. ರಾಜ್ಯ ಪ್ರವಾಸ ಮುಗಿಸಿದ ನಂತರ ಈ ಕುರಿತು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago