Categories: ಮೈಸೂರು

ಜೆಡಿಎಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ರಾಜಕಾರಣವನ್ನೇ ಬಿಡುವೆ ಎಂದ ಜಿಟಿ ದೇವೇಗೌಡ

ಮೈಸೂರು: ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಶಾಸಕ ಸಾರಾ ಮಹೇಶ್‌ ನಡುವಿನ ಆರೋಪ- ಪ್ರತ್ಯಾರೋಪಗಳು ತಾರಕ್ಕಕ್ಕೇರಿವೆ.

ʻಜಿಟಿಡಿ ಅವರನ್ನು ದೇವೇಗೌಡರು ಕರೆ ಮಾಡಿ ಕರೆದಿದ್ದರುʼ ಎಂಬ ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿಕೆಗೆ ಸೋಮವಾರ ತಿರುಗೇಟು ನೀಡಿದ ಜಿಟಿ ದೇವೇಗೌಡರು, ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ಬರುವಂತೆ ಎಚ್‌.ಡಿ ದೇವೇಗೌಡರು ನನ್ನ ಕರೆದಿಲ್ಲ. ಕರೆದಿದ್ದೆ ಎಂದು ಅವರು ಹೇಳಿದರೆ, ನಾನು ಅಂದೇ ರಾಜಕಾರಣ ಬಿಟ್ಟು ಬಿಡುತ್ತೇನೆ ಎಂದರು.

ಸಾ.ರಾ ಮಹೇಶ್‌ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಪ್ರಮಾಣ ಮಾಡುತ್ತೇನೆ ಚಾಮುಂಡಿಬೆಟ್ಟಕ್ಕೆ ಬಾ, ಅಲ್ಲಿಗೆ ಬಾ ಅಂದರೆ ಹೋಗಲಾಗುತ್ತದೆಯೇ? ಎಂದು ಖಾರವಾಗಿ ಕೇಳಿದರು.

ಈ ಹಿಂದೆ ವಿಶ್ವಾನಾಥ್‌ ಜೊತೆ ಒಂದು ಬಾರಿ ಚಾಮುಂಡಿಬೆಟ್ಟಕ್ಕೆ ಹೋಗಿದ್ದಕ್ಕೆ ಏನಾಯಿತು ಎಂಬುದನ್ನು ಅವರ ನೆನಪಿನಲ್ಲಡಲಿ ಅವರಿಗಾದ ಹಾಗೇ ನನಗೂ ಹಾಗಬೇಕಾ ಎಂದು ವಾಗ್ದಾಳಿ ನಡೆಸಿದರು.

ಮುಂದುವರಿದು ಮಾತನಾಡುತ್ತಾ, ನಾನು ಯಾರ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ಆಗತ್ಯ ಇಲ್ಲ. ಯಾರ ಬೆಂಬಲವಿಲ್ಲದೆಯೂ ಸ್ವಂತವಾಗಿ ನನಗೆ ರಾಜಕೀಯ ಮಾಡುವುದು ಗೊತ್ತು, ಸ್ವಂತ ರಾಜಕೀಯದಿಂದ ಇಲ್ಲಿಯವರೆಗೆ ಬಂದಿದ್ದೇನೆ ಯಾರ ಕತ್ತನ್ನು ಕೊಯ್ದಿಲ್ಲ ಎಂದು ಹೇಳಿದರು.

ಜೆಡಿಎಸ್‌ನಿಂದ ನನಗೆ ಹಲವು ಬಾರಿ ನೋವಾಗಿದೆ ಇದು ಹೊಸದೇನಲ್ಲ. ಪದೇ ಪದೇ ನೋವಾಗುವುದು ನನಗೆ ಕರಗತವಾಗಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಇನ್ನು ಸಿಎಂ ಇಬ್ರಾಹಿಂ ಭೇಟಿಯ ಕುರಿತು ಪ್ರತಿಕ್ರಿಯಿಸಿ ಜಿಟಿಡಿ, ಇಬ್ರಾಹಿಂಗೆ ಪ್ರಾದೇಶಿಕ ಪಕ್ಷ ಕಟ್ಟಬೇಕು ಅಂಬ ಆಸೆ ಇದೆ ಈ ಕುರಿತು ನನ್ನ ಜೊತೆ ಚರ್ಚಿಸಿದ್ದಾರೆ. ರಾಜ್ಯ ಪ್ರವಾಸ ಮುಗಿಸಿದ ನಂತರ ಈ ಕುರಿತು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

46 seconds ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

6 mins ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

11 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

13 hours ago