ಮೈಸೂರು

ಗುಳಿಗೆ ಸಿದ್ದ ಒಳಗೆ ಮೇಯ್ದ: ನಿಮ್ಮ ಅಕ್ರಮಕ್ಕೆ ಈ ಲೆಟರ್‌ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್‌ ಟಾಂಗ್‌

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮೈಸೂರು ನಗರಾಭಿವೃದ್ಧಿ ಮಂಡಳಿಯಿಂದ ಜೆಡಿಎಸ್‌ ಈ ಲೇಟರ್‌ ಬಹಿರಂಗಗೊಳಿಸಿದೆ.

“ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ಎಂದು ಜೆಡಿಎಸ್‌ ಟೀಕಿಸಿದೆ.

“ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ವ್ಯಂಗ್ಯವಾಡಿದೆ.

ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …?

ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ… ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಜೆಡಿಎಸ್‌ ಆಗ್ರಹಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

17 mins ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

2 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

6 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

6 hours ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

6 hours ago