ಮೈಸೂರು

ಗುಳಿಗೆ ಸಿದ್ದ ಒಳಗೆ ಮೇಯ್ದ: ನಿಮ್ಮ ಅಕ್ರಮಕ್ಕೆ ಈ ಲೆಟರ್‌ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್‌ ಟಾಂಗ್‌

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮೈಸೂರು ನಗರಾಭಿವೃದ್ಧಿ ಮಂಡಳಿಯಿಂದ ಜೆಡಿಎಸ್‌ ಈ ಲೇಟರ್‌ ಬಹಿರಂಗಗೊಳಿಸಿದೆ.

“ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ಎಂದು ಜೆಡಿಎಸ್‌ ಟೀಕಿಸಿದೆ.

“ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ವ್ಯಂಗ್ಯವಾಡಿದೆ.

ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …?

ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ… ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಜೆಡಿಎಸ್‌ ಆಗ್ರಹಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago