ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ.
ಈ ಕುರಿತು ಜೆಡಿಎಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್ ಒಂದನ್ನು ಹಂಚಿಕೊಂಡಿದೆ.
ಮಾಹಿತಿ ಹಕ್ಕು ಕಾಯ್ದೆಯಡಿ ಮೈಸೂರು ನಗರಾಭಿವೃದ್ಧಿ ಮಂಡಳಿಯಿಂದ ಜೆಡಿಎಸ್ ಈ ಲೇಟರ್ ಬಹಿರಂಗಗೊಳಿಸಿದೆ.
“ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ಎಂದು ಜೆಡಿಎಸ್ ಟೀಕಿಸಿದೆ.
“ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ವ್ಯಂಗ್ಯವಾಡಿದೆ.
ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …?
ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ… ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಜೆಡಿಎಸ್ ಆಗ್ರಹಿಸಿದೆ.
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ…