ಮೈಸೂರು

ಜೆಡಿಎಸ್‌ ವೀಕ್‌ ಪಾರ್ಟಿ : ಸಿಎಂ ಸಿದ್ದರಾಮಯ್ಯ ಗುಡುಗು

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಮಹರಾಜ ಕಾಲೇಜಿನ ಮೈದಾನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

2008 ಮತ್ತು 2018ರಲ್ಲಿ ಅಧೊಕಾರಕ್ಕೆ ಬಂದಾಗ ಏನು ಮಾಡಲಿಲ್ಲ. ಬಿಜೆಪಿ ಪೂರ್ಣ ಬಹುಮತದೊಂದಿಗೆ ಬರಲಿಲ್ಲ. 2008ರಲ್ಲಿ 110, 2018ರಲ್ಲಿ 111ಸೀಟುಗಳನ್ನು ಪಡೆದುಕೊಂಡಿತು. ಜಾ.ದಳ 2018ರಲ್ಲಿ ಕೇವಲ 18ಸೀಟುಗಳನ್ನು ಗೆದ್ದಿತು. ಜಾ.ದಳ ಪ್ರತಿಬಾರಿ ಕಡಿಮೆಯಾಗುತ್ತಿದೆ ಎಂದು ಟೀಕಿಸಿದರು.

ಇದೊಂದು ಶಕ್ತಿ ಪ್ರದರ್ಶನವಲ್ಲ. ಬಿಜೆಪಿ,ಜಾ.ದಳದವರು ಹೇಳುವ ಶಕ್ತಿ ಪ್ರದರ್ಶನವಲ್ಲ. ಅಭಿವೃದ್ದಿ ಶಕ್ತಿಯನ್ನು ಮುಂದಿಡುವ ಸಮಾವೇಶವಾಗಿದೆ. ಮತ್ಸರ ಇರಬೇಕು. ಆದರೆ, ಬಿಜೆಪಿ,ಜಾ.ದಳದ ನಾಯಕರಿಗೆ ಇಷ್ಟೊಂದು ಮತ್ಸರ ಇರಬಾರದು. ಸಹಿಸಿಕೊಳ್ಳಲಾಗದು. ಸುಳ್ಳುಹೇಳಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮೈಸೂರು ನಗರಕ್ಕೆ ಬಿಜೆಪಿ, ಜಾ.ದಳದವರ ಕೊಡುಗೆ ಏನಿಲ್ಲ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ,ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲ್ಲ. ಜಾ.ದಳದಲ್ಲಿ ಇರುವ ಶಾಸಕರು, ಕಾರ್ಯಕರ್ತರು ನಿಮ್ಮನ್ನು ಕೈ ಬಿಡುತ್ತಿರುವ ಕಾರಣ ಬಿಜೆಪಿಯೊಂದಿಗೆ ಸೇರಿಕೊಂಡಿದ್ದಾರೆ. ಜನರ ಪ್ರೀತಿ,ವಿಶ್ವಾಸ ಉಳಿಸಿಕೊಂಡಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago