ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು.
ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದರು. ಇನ್ನೊಂದಿಷ್ಟು ಜೆಡಿಎಸ್ ಕಾರ್ಯಕರ್ತರು ನಾಮಪತ್ರ ಸಲ್ಲಿಸದಂತೆ ಶ್ರೀಕಂಠೇಗೌಡರನ್ನು ಎಳೆದಾಡಿ, ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ಪರಸ್ಪರ ಬೆಂಬಲಿಗರು ಮತ್ತು ಜೆಡಿಎಸ್ ಅಭ್ಯರ್ಥಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಗಾಯಗೊಂಡ ಶ್ರೀಕಂಠೇಗೌಡರು ಆಸ್ಪತ್ರೆ ಸೇರಿದ್ದು ನಾಮಪತ್ರ ಸಲ್ಲಿಸಲು ಆಗಲಿಲ್ಲ.
ನಾಮಪತ್ರ ಸಲ್ಲಿಕೆಗೆ ಗುರುವಾರ (ಮೇ.16) ಕೊನೆಯ ದಿನವಾಗಿತ್ತು.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…