ಮೈಸೂರು: ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿಗಳು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಕಂ ಮೆರಿಟ್ ಆಧಾರಿತ) ನೇರ ಸಂದರ್ಶನದ ಮೂಲಕ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನೇರ ಸಂದರ್ಶನವನ್ನು ನಜರ್ಬಾದ್ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಜುಲೈ 4 ರಂದು ಬೆಳಿಗ್ಗೆ 10.30 ಗಂಟೆಗೆ ನಿಗಧಿಪಡಿಸಲಾಗಿದ್ದು, ಆಸಕ್ತರು ಅನ್ವಯವಾಗುವ ತಮ್ಮ ಎಲ್ಲಾ ದೃಢೀಕೃತ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಮತ್ತು ಅತ್ತಿಗೋಡು, ಕೆ ಆರ್ ನಗರ ತಾಲೂಕಿನ ಮುಂಡೂರು ಹಾಗೂ ಅಡಗೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ (ಹೌಸ್ಮನ್ ಶಿಪ್) ನಲ್ಲಿ ಉತ್ತೀರ್ಣರಾಗಿರಬೇಕು.
ನಂಜನಗೂಡು, ಹುಣಸೂರು ಹಾಗೂ ಎಚ್.ಡಿ.ಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ಮತ್ತು ಸ್ನಾತಕೋತ್ತರ ಪದವಿ (ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ತಜ್ಞರು) ಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ದೂ.ಸಂ: 0821-2529205 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಮಟ್ಟದ ಗುತ್ತಿಗೆ ಆಧಾರದ ವೈದ್ಯರ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…