ಮೈಸೂರು: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ಮುಟ್ಟಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ರೋಜ಼್ಗಾರ್ ಯೋಜನೆಯ ಅಡಿಯಲ್ಲಿ ಯುವ ಶಕ್ತಿಯೊಂದಿಗೆ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಬಲಪಡಿಸುವ ಗುರಿಯೊಂದಿಗೆ, ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000ಕ್ಕೂ ಅಧಿಕ ಯುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮಾಡುವ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿಗೆ ಪೂರಕೆವಾಗಿ ಯುವಕರಿಗೆ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ಶುಭಹಾರೈಸಿದರು. ಶಾಸಕರಾದ ಟಿ.ಎಸ್.ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…